Webdunia - Bharat's app for daily news and videos

Install App

ಸಂತಾಪ ಸೂಚನೆ ಬಳಿಕ ಸಂಸತ್ ಕಲಾಪ ನಾಳೆಗೆ ಮುಂದೂಡಿಕೆ

16 ಮಸೂದೆಗಳ ಅನುಮೋದನೆಗೆ ಕೇಂದ್ರ ಸಿದ್ಧತೆ

Webdunia
ಸೋಮವಾರ, 17 ಜುಲೈ 2017 (13:31 IST)
ನವದೆಹಲಿ:ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಬೆಳಗ್ಗೆ 11 ಗಂಟೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮೊದಲ ದಿನದ  ಕಲಾಪ ಆರಂಭವಾಯಿತು. ಕಲಾಪ ಆರಂಭವಾಗುತ್ತಿದ್ದಂತೆ ಉಭಯ ಸದನಗಳಲ್ಲಿ ಮೃತ ಗಣ್ಯರು ಹಾಗೂ ಇತ್ತೀಚೆಗೆ  ಉಗ್ರರ ದಾಳಿ ಮೃತಪಟ್ಟ ಅಮರ್‌ನಾಥ್‌ ಯಾತ್ರಿಗಳಿಗೆ ಸಂತಾಪ ಸೂಚಿಸಲಾಯಿತು.
 
ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅಮರನಾಥ್ ಯಾತ್ರೆ ಮೇಲಿನ ದಾಳಿಯನ್ನು ಒಕ್ಕೋರಲಿನಿಂದ ಖಂಡಿಸಲಾಗಿದ್ದು, ಅಂತೆಯೇ ದಾಳಿ ವೇಳೆ ಮೃತಪಟ್ಟ ಯಾತ್ರಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.  ಅಂತೆಯೇ ಇತ್ತೀಚೆಗೆ ಅಗಲಿದ ಸಂಸತ್ ನ ಮಾಜಿ ಸದಸ್ಯರಿಗೂ ಗೌರವ ಸಲ್ಲಿಕೆ ಮಾಡಿ ಸ್ಪೀಕರ್ ಕಲಾಪವನ್ನು ನಾಳೆಗೆ ಮುಂದೂಡಿದರು.
 
ಆಗಸ್ಟ್ 11ರವರೆಗೂ ಸಂಸತ್ ನ ಉಭಯ ಕಲಾಪಗಳು ನಡೆಯಲಿದ್ದು, ಕಾಶ್ಮೀರ ಹಿಂಸಾಚಾರ, ಡೊಕ್ಲಾಮ್ ವಿವಾದ, ಅಮರನಾಥ್ ಯಾತ್ರೆ ಮೇಲಿನ ದಾಳಿ, ಜಿಎಸ್ ಟಿ ಗೊಂದಲ, ಡಾರ್ಜಲಿಂಗ್ ಹಿಂಸಾಚಾರ ಸೇರಿದಂತೆ ವಿವಿಧ  ವಿಷಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧವಾಗಿವೆ. ಇನ್ನು ಕೇಂದ್ರ ಸರ್ಕಾರ ಗ್ರಾಹಕ ರಕ್ಷಣಾ ಮಸೂದೆ, ಜಮ್ಮುಮತ್ತು ಕಾಶ್ಮೀರದಲ್ಲಿ ಜಿಎಸ್ ಟಿ ಜಾರಿ ಕುರಿತ ಮಸೂದೆ  ಸೇರಿದಂತೆ ಒಟ್ಟು 16 ಹೊಸ ಮಸೂದೆಗಳಿಗೆ ಅನುಮೋದನೆ ಪಡೆಯಲು ಕಾರ್ಯತಂತ್ರ ರೂಪಿಸಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments