Webdunia - Bharat's app for daily news and videos

Install App

ಪರಮಾಣು ಅಸ್ತ್ರ ಮೊದಲು ಬಳಸುವುದಿಲ್ಲ ಎನ್ನುವುದು ಸರಿಯಲ್ಲ: ಪರಿಕ್ಕರ್

Webdunia
ಶುಕ್ರವಾರ, 11 ನವೆಂಬರ್ 2016 (16:30 IST)
ಭಾರತ ಪರಮಾಣು ಅಸ್ತ್ರಗಳನ್ನು ಮೊದಲು ಬಳಸುವುದಿಲ್ಲ ಎನ್ನುವುದು ಸರಿಯಲ್ಲ ಎಂದು ಹೇಳುವುದರ ಮೂಲಕ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನ್ನಾಡುತ್ತಿದ್ದ ಅವರು, ನಾವಾಗಿಯೇ ಪರಮಾಣು ಅಸ್ತ್ರಗಳನ್ನು ಬಳಸಲು ಮುಂದಾಗುವುದಿಲ್ಲ ಎನ್ನುವುದು ಏತಕ್ಕೆ? ಹಾಗೆ ಹೇಳುವ ಬದಲು ಭಾರತ ಜವಾಬ್ದಾರಿಯುತ ಪರಮಾಣು ಶಕ್ತಿ ರಾಷ್ಟ್ರ ಎನ್ನಬೇಕಿದೆ. ನಾವು ಈ ಶಕ್ತಿಯನ್ನು ಎಂದು ಕೂಡ ಹೊಣೆಗೇಡಿತನದಿಂದ ಬಳಸುವುದಿಲ್ಲ ಎನ್ನಬೇಕು, ಇದು ನನ್ನ ಅಭಿಪ್ರಾಯ ಎಂದು ಪರಿಕ್ಕರ್ ಗುರುವಾರ ಹೇಳಿದ್ದಾರೆ.
 
ಇದು ನನ್ನ ಸಿದ್ಧಾಂತವಾಗಿದ್ದು, ಸರ್ಕಾರಕ್ಕೆ ಇದಕ್ಕೆ ಯಾವುದೇ ಸಂಬಂಧವಿಲ್ಲ. ಕೆಲವರು ಪರಿಕ್ಕರ್ ಪರಮಾಣು ಸಿದ್ಧಾಂತವನ್ನು ಬದಲಾಯಿಸಿದ್ದಾರೆಂದು ಹೇಳುತ್ತಾರೆ. ಅಂತವರಿಗೆ ನನ್ನ ಸ್ಪಷ್ಟ ಉತ್ತರವಿದು- ಪರಮಾಣು ಸಿದ್ಧಾಂತ ಯಾವುದೇ ಸರ್ಕಾರದ ನೀತಿಯಲ್ಲಿಯೂ ಬದಲಾಗಿಲ್ಲ .ಈಗಲೂ ಸಹ ಹಾಗೆ ಇದೆ ಎಂದಿದ್ದಾರೆ ಪರಿಕ್ಕರ್.
 
ಇದು ಸಚಿವರ ವೈಯಕ್ತಿಕ ಅಭಿಪ್ರಾಯ. ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಸಹ ಸ್ಪಷ್ಟೀಕರಣ ನೀಡಿದ್ದಾರೆ. 
 
ಮೇ 1998ರಲ್ಲಿ ಪೋಕ್ರಾನ್‌ನಲ್ಲಿ 5 ಯಶಸ್ವಿ ಪರಮಾಣು ಪರೀಕ್ಷೆ ನಡೆಸಿದ್ದ ಭಾರತ ನಾವಾಗಿಯೇ ಮೊದಲು ಪರಮಾಣು ಶಸ್ತ್ರಾಸ್ತ್ರವನ್ನು ಬಳಸುವುದಿಲ್ಲ ಎಂಬ ನಿಲುವನ್ನು ಪ್ರಕಟಿಸಿತ್ತು. ಭಾರತದ ಬೆನ್ನ ಹಿಂದೆಯೇ ಪಾಕಿಸ್ತಾನ ಕೂಡ ಯಶಸ್ವಿ ಪರೀಕ್ಷೆ ನಡೆಸಿತ್ತು. ಆದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಪಾಲಿಸಿಯನ್ನದು ಘೋಷಿಸಿಲ್ಲ. ಕೆಲ ದಿನಗಳ ಹಿಂದೆ ಸಹ ಪಾಕ್ ಅಧಿಕಾರಿಗಳು ಭಾರತದ ಮೇಲೆ ಪರಮಾಣು ಅಸ್ತ್ರ ಪ್ರಯೋಗಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದಿದ್ದರು.
 
ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದ ಅಧಿಕಾರಿಗಳು ಭಾರತದ ಮೇಲೆ ಪರಮಾಣು ಅಸ್ತ್ರವನ್ನು ಬಳಸಲು ಪಾಕಿಸ್ತಾನ ಹಿಂಜರಿಯುವುದಿಲ್ಲ ಎಂದು ಹೇಳಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments