Webdunia - Bharat's app for daily news and videos

Install App

ಹಿಂದೂಗಳ ರಕ್ಷಣೆ ಮಾಡಬೇಕು ಎನ್ನುವ ಪವನ್ ಕಲ್ಯಾಣ್ ಪತ್ನಿ ಜೊತೆ ಚರ್ಚ್ ನಲ್ಲಿರುವ ಫೋಟೋ ವೈರಲ್

Krishnaveni K
ಗುರುವಾರ, 26 ಸೆಪ್ಟಂಬರ್ 2024 (11:24 IST)
ಆಂಧ್ರಪ್ರದೇಶ: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಪಟ್ಟಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪವನ್ ಕಲ್ಯಾಣ್ ಹಿಂದೂಗಳ ರಕ್ಷಣೆ ಬಗ್ಗೆ ವೀರಾವೇಶದಿಂದ ಮಾತನಾಡಿದ್ದರು. ಸನಾತನಧರ್ಮ ರಕ್ಷಣೆ ಬೋರ್ಡ್ ಸ್ಥಾಪನೆ ಅಗತ್ಯವಿದೆ ಎಂದಿದ್ದರು. ಆದರೆ ಅವರು ಪತ್ನಿ ಜೊತೆ ಚರ್ಚ್ ಒಂದರಲ್ಲಿ ಪ್ರಾರ್ಥನೆ ಮಾಡುವ ಹಳೆಯ ಫೋಟೋವೊಂದು ಈಗ ವೈರಲ್ ಆಗುತ್ತಿದೆ.

ಸೋಷಿಯಲ್ ಮೀಡಿಯಾದಲ್ಲಿ ಪವನ್ ಪತ್ನಿ ಜೊತೆಗೆ ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದ್ದು, ಇದನ್ನು ನೋಡಿದ ನೆಟ್ಟಿಗರು ಪವನ್ ಹೇಳುವುದೊಂದು ಮಾಡುವುದು ಇನ್ನೊಂದಾ ಎಂದು ಕಿಡಿ ಕಾರಿದ್ದಾರೆ.

ಪವನ್ ಕಲ್ಯಾಣ್ ಪತ್ನಿ ರಷ್ಯಾ ಮೂಲದ ಅನ್ನಾ ಕ್ರಿಶ್ಚಿಯನ್ ಧರ್ಮದವರು ಎನ್ನಲಾಗಿದೆ. ಹೀಗಾಗಿ ಪತ್ನಿ ಜೊತೆಗೆ ಒಮ್ಮೆ ಚರ್ಚ್ ಗೆ ಹೋಗಿ ಪ್ರಾರ್ಥನೆ ಮಾಡುತ್ತಿರುವ ಫೋಟೋವೊಂದು ವೈರಲ್ ಆಗಿದೆ. ಇಷ್ಟೆಲ್ಲಾ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಪವನ್ ವೈಯಕ್ತಿಕವಾಗಿ ಕ್ರಿಶ್ಚಿಯನ್ ಧರ್ಮವನ್ನು ಅನುಸರಿಸುತ್ತಿದ್ದಾರಾ ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ.

ನಟ ಪ್ರಕಾಶ್ ರಾಜ್ ಗೆ ತಿರುಗೇಟು ಕೊಡುವಾಗ ಪವನ್, ‘ಕ್ರಿಶ್ಚಿಯಾನಿಟಿ ಬಗ್ಗೆ ನಾವು ಟೀಕೆ ಮಾಡಿದರೆ ಹೇಗಿರುತ್ತದೆ’ ಎಂದು ಪ್ರಶ್ನೆ ಮಾಡಿದ್ದರು. ಈ ಹಿಂದೆ ಪವನ್ ನಾನೂ ಕ್ರಿಶ್ಚಿಯನ್ ಧರ್ಮವನ್ನು ಫಾಲೋ ಮಾಡುವುದಾಗಿ ಹೇಳಿದ್ದ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿದೆ. ಈ ಫೋಟೋ, ವಿಡಿಯೋ ನೋಡಿ ಅವರನ್ನು ಕೆಲವರು ಟೀಕೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments