ಜೀಸಸ್ ಬಗ್ಗೆ ಮಾತನಾಡಬಹುದು, ಸನಾತನ ಧರ್ಮದ ಬಗ್ಗೆ ಮಾತನಾಡಬಾರದಾ: ಪವನ್ ಕಲ್ಯಾಣ್ ಆಕ್ರೋಶ

Krishnaveni K
ಮಂಗಳವಾರ, 24 ಸೆಪ್ಟಂಬರ್ 2024 (11:34 IST)
ಹೈದರಾಬಾದ್: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಮೇಲೆ ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ವಾಗ್ದಾಳಿ ನಡೆಸಿದ್ದಾರೆ.

ತಿರುಪತಿ ಲಡ್ಡುಗೆ ಜಗನ್ ರೆಡ್ಡಿ ಸಿಎಂ ಆಗಿದ್ದಾಗ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಎಂಬ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಆಂಧ್ರ ಡಿಸಿಎಂ ಮತ್ತು ನಟ ಪವನ್ ಕಲ್ಯಾಣ್ ದೇಶದಲ್ಲಿ ಸನಾತನ ಧರ್ಮ ಟ್ರಸ್ಟ್  ನಿರ್ಮಾಣ ಮಾಡುವ ಅಗತ್ಯವಿದೆ ಎಂದಿದ್ದರು.

ಇದಕ್ಕೆ ನಟ ಪ್ರಕಾಶ್ ರಾಜ್ ಕಾಮೆಂಟ್ ಮಾಡಿದ್ದರು. ಪವನ್ ನೀವು ನಿಮ್ಮ ರಾಜ್ಯದ ಬಗ್ಗೆ ಮಾತ್ರ ಗಮನ ಹರಿಸಿ. ಬೇಡದ ವಿಚಾರವೆಲ್ಲಾ ಯಾಕೆ ಎಂಬರ್ಥದಲ್ಲಿ ಮಾತನಾಡಿದ್ದರು. ದೇಶದಲ್ಲಿ ಈಗಾಗಲೇ ಸಾಕಷ್ಟು ಕೋಮುಗಲಭೆಗಳಾಗುತ್ತಿವೆ. ಇಂತಹ ಟ್ರಸ್ಟ್ ನಿರ್ಮಾಣ ಮಾಡಿದರೆ ಶಾಂತಿ ಕದಡಿದಂತಾಗುತ್ತದೆ ಎಂದಿದ್ದರು.

ಇದೀಗ ಪ್ರಕಾಶ್ ರಾಜ್ ವಿರುದ್ಧ ಪವನ್ ಕಲ್ಯಾಣ್ ವಾಗ್ದಾಳಿ ನಡೆಸಿದ್ದಾರೆ. ತಿರುಪತಿ ಲಡ್ಡು ಕಲಬೆರಕೆಯಾಗಿ ಅಪವಿತ್ರವಾಗಿರುವ ಕಾರಣಕ್ಕೆ ಪವನ್ ದೀಕ್ಷೆ ತೆಗೆದುಕೊಂಡಿದ್ದಾರೆ. ಈ ನಡುವೆ ಇಂದು ಪ್ರಕಾಶ್ ರಾಜ್ ವಿರುದ್ಧ ಕೆಂಡಾಮಂಡಲರಾಗಿ ಮಾತನಾಡಿದ್ದಾರೆ. ಜೀಸಸ್ ಬಗ್ಗೆ ಮಾತನಾಡಬಹುದು, ಪ್ರವಾದಿ ಬಗ್ಗೆ ಮಾತನಾಡಬಹುದು ಆದರೆ ಸನಾತನ ಧರ್ಮದ ಬಗ್ಗೆ ಮಾತನಾಡಬಾರದೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments