Webdunia - Bharat's app for daily news and videos

Install App

ಸನಾತನ ಧರ್ಮ ನಾಶ ನೋಡ್ತಾ ಇರಿ: ಪವನ್ ಕಲ್ಯಾಣ್ ಗೆ ಉದಯನಿಧಿ ತಿರುಗೇಟು

Krishnaveni K
ಶನಿವಾರ, 5 ಅಕ್ಟೋಬರ್ 2024 (11:07 IST)
ಚೆನ್ನೈ: ಸನಾತನ ಧರ್ಮ ನಾಶ ಕುರಿತು ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಮತ್ತು ತಮಿಳುನಾಡು ಡಿಸಿಎಂ ಉದಯನಿಧಿ ನಡುವಿನ ಕಿತ್ತಾಟ ತಾರಕಕ್ಕೇರಿದೆ. ಇಬ್ಬರೂ ಸವಾಲು-ಪ್ರತಿ ಸವಾಲು ಹಾಕಿಕೊಂಡಿದ್ದಾರೆ.

ಕೆಲವು ಸಮಯದ ಹಿಂದೆ ಉದಯನಿಧಿ, ಸನಾತನ ಧರ್ಮ ಎಂದರೆ ಡೆಂಗ್ಯೂ ನಂತಹ ವೈರಸ್ ಇದ್ದಂತೆ. ಇದನ್ನು ನಾಶ ಮಾಡಬೇಕು. ಇಲ್ಲದೇ ಹೋದರೆ ಸಮಾಜದಲ್ಲಿ ಸಮಾಧಾನ ಇರಲ್ಲ ಎಂದಿದ್ದರು. ಅವರ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅದರ ಬಗ್ಗೆ ಈಗ ಪವನ್ ಕಲ್ಯಾಣ್ ಪ್ರಸ್ತಾಪಿಸಿ ಟೀಕಿಸಿದ್ದಾರೆ.

ಇತ್ತೀಚೆಗೆ ತಿರುಪತಿ ಲಡ್ಡು ವಿವಾದದ ಬಳಿಕ ಸನಾತನ ಧರ್ಮ ಟ್ರಸ್ಟ್ ಸ್ಥಾಪನೆಯಾಗಬೇಕು ಎಂದು ಪವನ್ ಆಗ್ರಹಿಸಿದ್ದರು. ಇದೀಗ ಈ ಹಿಂದೆ ಸನಾತನ ಧರ್ಮವನ್ನು ವೈರಸ್ ಎಂದಿದ್ದ ಉದಯನಿಧಿ ಬಗ್ಗೆ ಟೀಕಿಸಿದ್ದರು. ಸನಾತನ ಧರ್ಮವನ್ನು ನಾಶ ಮಾಡಲು ಯತ್ನಿಸಿದವರೇ ನಾಶವಾಗಿ ಹೋಗುತ್ತಾರೆ ಎಂದಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಉದಯನಿಧಿ, ನೋಡ್ತಾ ಇರಿ ಎಂದು ಸವಾಲು ಹಾಕಿದ್ದಾರೆ. ಇನ್ನೊಂದೆಡೆ ಉದಯನಿಧಿ ಪರವಾಗಿ ಮಾತನಾಡಿರುವ ಡಿಎಂಕೆ ವಕ್ತಾರ ಡಾ ಹಫೀಜುಲ್ಲಾ, ಹಿಂದೂಗಳ ನಿಜವಾದ ಶತ್ರುಗಳು ಚಂದ್ರಬಾಬು ನಾಯ್ಡು ಟಿಡಿಪಿ ಮತ್ತು ಬಿಜೆಪಿಯವರೇ. ರಾಜಕೀಯಕ್ಕಾಗಿ ಧರ್ಮ ಬಳಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments