Webdunia - Bharat's app for daily news and videos

Install App

Pehalgam: ಕಾಶ್ಮೀರ ಪ್ರವಾಸ ಕ್ಯಾನ್ಸಲ್ ಮಾಡ್ತಿರುವ ಜನ: ರೊಚ್ಚಿಗೆದ್ದ ಕಾಶ್ಮೀರಿಗರು

Krishnaveni K
ಶನಿವಾರ, 26 ಏಪ್ರಿಲ್ 2025 (08:32 IST)
Photo Credit: X
ಜಮ್ಮು ಕಾಶ್ಮೀರ: ಪಹಲ್ಗಾವ್ ನಲ್ಲಿ ಉಗ್ರರ ದಾಳಿಯ ಬಳಿಕ ಈಗ ಜನ ಮತ್ತೆ ಕಾಶ್ಮೀರಕ್ಕೆ ತೆರಳಲು ಭಯಪಡುವಂತಾಗಿದೆ. ಈಗಾಗಲೇ ಟಿಕೆಟ್ ಬುಕ್ ಮಾಡಿಕೊಂಡಿದ್ದವರೆಲ್ಲಾ ಕ್ಯಾನ್ಸಲ್ ಮಾಡುತ್ತಿದ್ದಾರೆ. ಇದರಿಂದ ಕಾಶ್ಮೀರಿಗರು ರೊಚ್ಚಿಗೆದ್ದಿದ್ದಾರೆ.

ಒಂದು ಕಾಲದಲ್ಲಿ ಉಗ್ರರ ಹಾವಳಿಗೆ ತತ್ತರಿಸಿದ್ದ ಕಾಶ್ಮೀರ ಆರ್ಟಿಕಲ್ 370 ರದ್ದತಿ ಬಳಿಕ ಶಾಂತಿಯ ತಾಣವಾಗಿತ್ತು. ಇತ್ತೀಚೆಗೆ ಕಳೆದ ಎರಡು ವರ್ಷಗಳಲ್ಲಿ ಕಾಶ್ಮೀರಕ್ಕೆ ಪ್ರವಾಸ ತೆರಳುವವರ ಸಂಖ್ಯೆ ಹೆಚ್ಚಾಗಿತ್ತು. ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ದುಡಿಯಲು ನಾನಾ ದಾರಿಗಳಿದ್ದವು.

ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದರಿಂದ ವ್ಯಾಪಾರ, ಲಾಡ್ಜ್, ಕುದುರೆ ಸವಾರಿ ಇತ್ಯಾದಿಗಳ ಮೂಲಕ ಸ್ಥಳೀಯರು ಆದಾಯಕ್ಕೆ ಮೂಲ ಕಂಡುಕೊಂಡಿದ್ದರು. ಆದರೆ ಈಗ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಾದ ಬಳಿಕ ಬಹುತೇಕರು ಪ್ರವಾಸ ಕ್ಯಾನ್ಸಲ್ ಮಾಡುತ್ತಿದ್ದಾರೆ. ವಿಮಾನಗಳೂ ಬಿಕೋ ಎನ್ನುತ್ತಿವೆ.

ಇದರಿಂದಾಗಿ ಸ್ಥಳೀಯರ ಹೊಟ್ಟೆ ಮೇಲೆ ಹೊಡೆದಂತಾಗಿದೆ. ಹೀಗಾಗಿ ರೊಚ್ಚಿಗೆದ್ದಿರುವ ಸ್ಥಳೀಯರು ಉಗ್ರರನ್ನು ಮಟ್ಟ ಹಾಕಿ ಮತ್ತೆ ಕಾಶ್ಮೀರನ್ನು ಶಾಂತಿಯ ತಾಣವಾಗಿ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಪ್ರವಾಸಿಗರು ಬಾರದೇ ಇದ್ದರೆ ನಮ್ಮ ಹೊಟ್ಟೆಪಾಡೇನು ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಆದರೆ ಸದ್ಯಕ್ಕಂತೂ ಪ್ರವಾಸಿಗರು ಕಾಶ್ಮೀರದ ಕಡೆಗೆ ತೆರಳುವುದು ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments