Webdunia - Bharat's app for daily news and videos

Install App

Pehalgam terror attack: ಕುಟುಂಬದವರಿಗೆ ನ್ಯಾಯ ಸಿಗಬೇಕು, ಕೇಂದ್ರಕ್ಕೆ ನಮ್ಮ ಬೆಂಬಲವಿದೆ ಎಂದ ಖರ್ಗೆ, ರಾಹುಲ್ ಗಾಂಧಿ

Krishnaveni K
ಬುಧವಾರ, 23 ಏಪ್ರಿಲ್ 2025 (13:57 IST)
ನವದೆಹಲಿ: ಆಡಳಿತ ಪಕ್ಷ, ವಿಪಕ್ಷ ಎಂದು ಎಷ್ಟೇ ವಿರೋಧ ಅಭಿಪ್ರಾಯಗಳಿರಲಿ. ಆದರೆ ದೇಶದ ವಿಚಾರಕ್ಕೆ ಬಂದಾಗ ಒಂದಾಗಿರಬೇಕು. ಇದೀಗ ಪೆಹಲ್ಗಾಮ್ ದಾಳಿ ವಿಚಾರದಲ್ಲೂ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಪೆಹಲ್ಗಾಮ್ ನಲ್ಲಿ ನಿನ್ನೆ ಪಾಕ್ ಪ್ರೇರಿತ ಉಗ್ರರು ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಕೆಲವರು ಕನ್ನಡಿಗರೂ ಸೇರಿದ್ದಾರೆ. ಘಟನೆ ಬಗ್ಗೆ ಈಗ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಇದರ ಬೆನ್ನಲ್ಲೇ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಪೆಹಲ್ಗಾಮ್ ಉಗ್ರರ ದಾಳಿಯನ್ನು ಕ್ಷಮಿಸುವಂತಹದ್ದಲ್ಲ. ಉಗ್ರರನ್ನು ಕೇಂದ್ರ ಸರ್ಕಾರ ಸದೆಬಡಿಯಬೇಕು. ಕೇಂದ್ರಕ್ಕೆ ನಮ್ಮ ಸಂಪೂರ್ಣ ಬೆಂಬಲವಿರಲಿದೆ’ ಎಂದಿದ್ದಾರೆ.

ಇನ್ನೊಂದೆಡೆ ರಾಹುಲ್ ಗಾಂಧಿ ಕೂಡಾ ಟ್ವೀಟ್ ಮಾಡಿದ್ದು, ‘ಉಗ್ರರ ದಾಳಿಯಲ್ಲಿ ಬಲಿಯಾದ ಪ್ರತಿಯೊಂದು ಕುಟುಂಬದವರಿಗೂ ನ್ಯಾಯ ಸಿಗಬೇಕು. ನಮ್ಮ ಸಂಪೂರ್ಣ ಬೆಂಬಲ ನಿಮಗಿದೆ’ ಎಂದು ಕೇಂದ್ರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಗೃಹಸಚಿವ ಅಮಿತ್ ಶಾ ಕಾಶ್ಮೀರದಲ್ಲೇ ಬೀಡುಬಿಟ್ಟಿದ್ದು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಲೇ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments