Webdunia - Bharat's app for daily news and videos

Install App

Pehalgam terror attack: ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಆಗುತ್ತಾ

Krishnaveni K
ಬುಧವಾರ, 23 ಏಪ್ರಿಲ್ 2025 (08:18 IST)
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಅಟ್ಟಹಾಸ ಮೆರೆದಿದ್ದು ಹಲವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಘಟನೆ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು ಉಗ್ರರನ್ನು ಸುಮ್ನೇ ಬಿಡಲ್ಲ ಎಂದಿದ್ದಾರೆ. ಇದರ ನಡುವೆಯೇ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಆಗುತ್ತಾ ಎಂಬ ಅನುಮಾನ ಮೂಡಿದೆ.

ಜಮ್ಮು ಕಾಶ್ಮೀರದಲ್ಲಿ ಇದೀಗ ತಾನೇ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತಿತ್ತು. ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಸಾಕಷ್ಟು ಸಂಖ್ಯೆಯಲ್ಲಿ ಭೇಟಿ ಕೊಡುತ್ತಿದ್ದರು. ಇದರ ಬೆನ್ನಲ್ಲೇ ಉಗ್ರರು ನಡೆಸಿದ ಈ ದಾಳಿ ಪ್ರವಾಸಿಗರ ಮನದಲ್ಲಿ ಭೀತಿ ಸೃಷ್ಟಿಸಿದೆ.

ಮಡಿದವರಲ್ಲಿ ಕೆಲವರು ಆಗಷ್ಟೇ ಮದುವೆ ಮುಗಿಸಿ ಹನಿಮೂನ್ ಗೆ ಬಂದವರೂ ಇದ್ದರು. ಕುಟುಂಬ ಸಮೇತ ಹೋಗಿದ್ದಾಗ ಇಂತಹದ್ದೊಂದು ದುರ್ಘಟನೆಯಾಗಿದ್ದು ಕನಸೋ ಎಂಬಂತೆ ಭಾಸವಾಗುತ್ತಿದೆ. ತಮ್ಮವರು ತಮ್ಮ ಕಣ್ಣೆದುರೇ ಪ್ರಾಣ ಕಳೆದುಕೊಂಡಿದ್ದನ್ನು ಅರಗಿಸಿಕೊಳ್ಳಲೂ ಅವರಿಗೆ ಆಗುತ್ತಿಲ್ಲ.

ಇದರ ನಡುವೆ ಉಗ್ರರ ದಾಳಿಗೆ ಪ್ರತೀಕಾರ ತೀರಿಸದೇ ಬಿಡಲ್ಲ ಎಂದು ಮೋದಿ ಗುಡುಗಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಮೋದಿ ಕ್ಷಣ ಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದರು. ಈ ಹಿಂದೆ ಉಗ್ರರು ಭಾರತೀಯ ಸೇನೆ ಮೇಲೆ ದಾಳಿ ಮಾಡಿದಾಗ ಭಾರತ ಒಮ್ಮೆ ಸರ್ಜಿಕಲ್ ಸ್ಟ್ರೈಕ್ ಇನ್ನೊಮ್ಮೆ ಏರ್ ಸ್ಟ್ರೈಕ್ ಮಾಡಿ ಉಗ್ರರನ್ನು ಸದೆಬಡಿದಿತ್ತು. ಇದಾದ ಬಳಿಕ ಉಗ್ರ ದಾಳಿಗಳು ತಕ್ಕಮಟ್ಟಿಗೆ ತಣ್ಣಗಾಗಿದ್ದವು. ಆದರೆ ಈಗ ಮತ್ತೆ ಅಮಾಯಕ ಪ್ರಾಣ ತೆಗೆದ ಉಗ್ರರ ಮೇಲೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಆಗಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments