Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ

Krishnaveni K
ಶುಕ್ರವಾರ, 25 ಏಪ್ರಿಲ್ 2025 (12:24 IST)
Photo Credit: X
ನವದೆಹಲಿ: ಪಹಲ್ಗಾಮ್ ನಲ್ಲಿ ಅಮಾಯಕರ ಪ್ರಾಣವನ್ನು ಉಗ್ರರು ತೆಗೆದ ಬೆನ್ನಲ್ಲೇ ಭಾರತ ಆಕ್ರೋಶಗೊಂಡಿದ್ದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಇಸ್ರೇಲ್ ಮತ್ತು ಅಮೆರಿಕಾ ಯುದ್ಧ ವಿಮಾನಗಳು ಭಾರತಕ್ಕೆ ಬಂದಿಳಿದಿವೆ. ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಬಳಿಕ ಭಾರತ ರಾಜತಾಂತ್ರಿಕವಾಗಿ ಪಾಕಿಸ್ತಾನಕ್ಕೆ ಹೊಡೆತ ನೀಡಿದೆ. ವೀಸಾ ರದ್ದು, ಸಿಂಧೂ ನದಿ ಒಪ್ಪಂದ ಮುರಿದುಕೊಂಡಿದೆ. ಅತ್ತ ಪಾಕಿಸ್ತಾನವೂ ಶಿಮ್ಲಾ ಒಪ್ಪಂದವನ್ನು ಮುರಿದುಕೊಂಡಿದೆ.

ಇದೀಗ ಗಡಿಭಾಗದಲ್ಲಿ ಎರಡೂ ದೇಶಗಳು ಯುದ್ಧ ವಿಮಾನಗಳು, ಕ್ಷಿಪಣಿ ಪ್ರಯೋಗ ಮತ್ತು ಸೈನಿಕರ ನಿಯೋಜನೆ ಮಾಡುತ್ತಿದೆ. ನಿನ್ನೆ ರಾತ್ರಿಯಿಂದ ಪಾಕಿಸ್ತಾನ ಪಡೆಗಳು ತಾವಾಗಿಯೇ ಗುಂಡಿನ ದಾಳಿಗೆ ಮುಂದಾಗಿದ್ದಾರೆ. ಇದಕ್ಕೆ ಭಾರತೀಯ ಸೇನೆಯೂ ತಕ್ಕ ಉತ್ತರ ನೀಡಿದೆ.

ಇದರ ನಡುವೆ ಸೂರತ್ ನ ವಾಯುನೆಲೆಯಲ್ಲಿ ಇಸ್ರೇಲ್ ನ ಅತ್ಯಾಧುನಿಕ ಯುದ್ಧ ವಿಮಾನ ಬಂದು ನಿಂತಿತ್ತು. ಇದರ ಬೆನ್ನಲ್ಲೇ ಈಗ ಅಮೆರಿಕಾ ಯುದ್ಧವಿಮಾನವೂ ಸೂರತ್ ಗೆ ಬಂದಿಳಿದಿದೆ. ನಿನ್ನೆಯೇ ಅರಬ್ಬೀ ಸಮುದ್ರ ಗಡಿಯಲ್ಲಿ ಭಾರತ ತನ್ನ ನೌಕಾ ಸೇನೆಯ ಐಎನ್ಎಸ್ ಯುದ್ಧನೌಕೆಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿತ್ತು.

ಈ ಬೆಳವಣಿಗೆ ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ಬಾರಿ ಭಾರತ ಏಕಾಂಗಿಯಾಗಿ ಅಲ್ಲ, ತನ್ನ ಮಿತ್ರರಾಷ್ಟ್ರಗಳ ಸಹಾಯದೊಂದಿಗೇ ಪಾಕಿಸ್ತಾನಕ್ಕೆ ಪೆಟ್ಟು ನೀಡಲು ಮುಂದಾಗಿದೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments