Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರದಲ್ಲಿ ಪತ್ರಕರ್ತರಿಗೆ ನಿವೃತ್ತಿ ಯೋಜನೆ!

ಮಹಾರಾಷ್ಟ್ರದಲ್ಲಿ ಪತ್ರಕರ್ತರಿಗೆ ನಿವೃತ್ತಿ ಯೋಜನೆ!
ಅಮ್ರಾವತಿ , ಸೋಮವಾರ, 20 ಜುಲೈ 2015 (17:33 IST)
ಕಾರ್ಯನಿರತ ಪತ್ರಕರ್ತರಿಗೆ ನಿವೃತ್ತಿ ಯೋಜನೆಯನ್ನು ತರುವುದಕ್ಕೆ ಮಹಾರಾಷ್ಟ್ರ ಸರ್ಕಾರ ತಯಾರಿ ನಡೆಸಿದ್ದು, ಇದನ್ನು ಸದ್ಯದಲ್ಲಿಯೇ ಅಂತಿಮಗೊಳಿಸಲಾಗುವುದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. 
 
ರಾಜಪೇಠ್ ಪೊಲೀಸ್ ಠಾಣೆಯ ಬಳಿ ಪತ್ರಕರ್ತರ ಭವನವನ್ನು ಉದ್ಘಾಟಿಸಿದ ಬಳಿಕ ಸಂತ ಜ್ಞಾನೇಶ್ವರ ಸಾಂಸ್ಕೃತಿಕ ಭವನದಲ್ಲಿ ನೆರೆಯ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಫಡ್ನವೀಸ್ ಪತ್ರಕರ್ತರಿಗೆ ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸಹಾಯ ಕಲ್ಪಿಸುವುದಾಗಿ ಭರವಸೆ ನೀಡಿದರಲ್ಲದೆ ಕಾರ್ಯನಿರತ ಪತ್ರಕರ್ತರ ಯೂನಿಯನ್, ಅಮರಾವತಿ  (AUWJ)ಗೆ  10 ಲಕ್ಷ ರೂಪಾಯಿಯನ್ನು ಘೋಷಿಸಿದರು. 
 
ಮಹಾರಾಷ್ಟ್ರ ಸರಕಾರ ಕಾರ್ಯನಿರತ ಪತ್ರಕರ್ತರ ರಕ್ಷಣೆಗೆ ಸಂಬಂಧಿಸಿದ ಮಸೂದೆಯನ್ನು ಜಾರಿಗೆ ತರಲು ಗಂಭೀರವಾಗಿ  ಆಲೋಚಿಸುತ್ತಿದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ವಿವಿಧ ವಲಯಗಳಿಂದ ಸಲಹೆಗಳನ್ನು ಆಹ್ವಾನಿಸುತ್ತಿದ್ದೇವೆ ಎಂದು ತಿಳಿಸಿದರು.
 
ಆದರೆ ಪತ್ರಿಕೋದ್ಯಮದ ಸೋಗಿನಲ್ಲಿ ಜನರಿಗೆ ಬೆದರಿಕೆ ಒಡ್ಡಲು ಈ ಮಸೂದೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶವಿಲ್ಲ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada