Webdunia - Bharat's app for daily news and videos

Install App

ಜಮ್ಮು ಕಾಶ್ಮಿರದ ಜನತೆ ಭಾರತದ ಪರವಾಗಿದ್ದಾರೆ: ಬಿಜೆಪಿ

Webdunia
ಸೋಮವಾರ, 6 ಜುಲೈ 2015 (15:10 IST)
ಜಮ್ಮು ಕಾಶ್ಮಿರದ ಜನತೆ ತಾವು ಭಾರತದ ಅವಿಭಾಜ್ಯ ಅಂಗವಾಗಿದ್ದೇವೆ ಎಂದು ಭಾವಿಸುತ್ತಾರೆ. ಕೇಂದ್ರ ಸರಕಾರ ರಾಜ್ಯದ ಅಭಿವೃದ್ಧಿಗಾಗಿ ಬೃಹತ್ ಯೋಜನೆಗಳನ್ನು ಜಾರಿಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ. 
 
ಜಮ್ಮು ಕಾಶ್ಮಿರ ಮತ್ತು ಲಡಾಕ್ ಪ್ರದೇಶದಲ್ಲಿರುವ ಬಹುತೇಕ ನಿವಾಸಿಗಳು ಭಾರತದ ಅವಿಭಾಜ್ಯ ಎಂದು ಭಾವಿಸಿದ್ದಾರೆ. ರಾಜಕೀಯ ನಾಯಕರು ಯಾವ ರೀತಿ ಬೇಕಾದರು ಹೇಳಲಿ. ಆದರೆ, ಇಲ್ಲಿರುವ ಜನತೆ ತಾವು ಭಾರತದ ನಾಗರಿಕರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಎಂದು ಸಂತಸ ವ್ಯಕ್ತಪಡಿಸಿದರು. 
 
ಜಮ್ಮು ಮತ್ತು ಕಾಶ್ಮಿರದ ಜನತೆ ಭಾರತೀಯ ನಾಗರಿಕರಾಗಿದ್ದರಿಂದ ಅವರಿಗೆ ಅಗತ್ಯವಾಗಿರುವುದನ್ನು ಕೇಂದ್ರ ಸರಕಾರದಿಂದ ಪಡೆಯಲು ಅಧಿಕಾರ ಹೊಂದಿದ್ದಾರೆ ಎಂದು ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜನ್ಮದಿನಾಚರಣೆ ಸಂದರ್ಭದಲ್ಲಿ ತಿಳಿಸಿದ್ದಾರೆ.    
 
ಜಮ್ಮು ಕಾಶ್ಮಿರದ ಜನತೆಗೆ ಅಗತ್ಯವಾಗಿರುವ ಮೂಲಸೌಕರ್ಯಗಳನ್ನು ಒದಗಿಸಿ ನೆರವು ನೀಡಲು ಕೇಂದ್ರ ಸರಕಾರ ಸಿದ್ದವಾಗಿದೆ.ಜಮ್ಮು, ಲಡಾಕ್ ಮತ್ತು ಕಾಶ್ಮಿರ ಪ್ರದೇಶದ ಜನತೆಗೆ ಸರಕಾರ ಬೃಹತ್ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ಪ್ರದಾನ ಕಾರ್ಯದರ್ಶಿ ರಾಮ್ ಮಾಧವ್ ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments