Webdunia - Bharat's app for daily news and videos

Install App

ಪಂಜಾಬ್ ಅಭಿವೃದ್ಧಿಯನ್ನು ಬಯಸುತ್ತದೆ, ನಾಟಕೀಯ ವರ್ತನೆಯನ್ನಲ್ಲ: ಸಿಧು ಬಗ್ಗೆ ಬಿಜೆಪಿ ಪ್ರತಿಕ್ರಿಯೆ

Webdunia
ಗುರುವಾರ, 18 ಆಗಸ್ಟ್ 2016 (17:06 IST)
ಬಿಜೆಪಿಯ ಮಾಜಿ ನಾಯಕ, ಕ್ರಿಕೆಟ್ ಆಟಗಾರ ನವಜೋತ್ ಸಿಧು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅವರನ್ನು ಭೇಟಿಯಾಗಿ  ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನಕ್ಕೆ ಆಗ್ರಹಿಸಿದ್ದುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಪಂಜಾಬ್ ಅಭಿವೃದ್ಧಿಯನ್ನು ಬಯಸುತ್ತದೆ, ನಾಟಕೀಯ ವರ್ತನೆಯನ್ನಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.
 
ಆಪ್ ನಾಯಕ ಮತ್ತು ನವಜೋತ್ ಸಿಂಗ್ ಸಿಧು ಭೇಟಿಯ ಹಿನ್ನೆಲೆಯಲ್ಲಿ ಎದ್ದಿರುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಬಿಜೆಪಿ ನಾಯಿ ಶೈನಾ ಎನ್‌ಸಿ, ಪಂಜಾಬ್ ಜನರು ನಾಟಕೀಯ ವರ್ತನೆಯ ಭಾಗವಾಗಲು ಬಯಸುವುದಿಲ್ಲ. ಅವರು ಬಯಸುವುದು ಕೇವಲ ಉತ್ತಮ ಅಭಿವೃದ್ಧಿ. ಅದು ಸಾಧ್ಯವಾಗುವುದು ಕೇವಲ ಬಿಜೆಪಿ-ಅಕಾಲಿ ದಳ ನೇತೃತ್ವದ ಸರ್ಕಾರದಿಂದ ಮಾತ್ರ ಎಂದು ಹೇಳಿದ್ದಾರೆ.
 
ಆಗಸ್ಟ್ 12 ರ ರಾತ್ರಿ ಸಿಧು ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿದ್ದರು.
 
ವರದಿಗಳ ಪ್ರಕಾರ ಕ್ರಿಕೆಟರ್ ಪರಿವರ್ತಿತ ರಾಜಕಾರಣಿ ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ಹೆಸರು ಘೋಷಿಸಬೇಕು ಮತ್ತು ತಮ್ಮ ಪತ್ನಿ ನವಜೋತ್ ಕೌರ್ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಸೀಟು ನೀಡಬೇಕೆಂದು ಆಪ್ ನಾಯಕತ್ವದ ಮುಂದೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವುದಕ್ಕೆ ಆಪ್ ಖಡಾಖಂಡಿತವಾಗಿ ನಿರಾಕರಿಸಿದೆ.  
 
ಜತೆಗೆ ಆಪ್ ಸಂವಿಧಾನ ಒಂದೇ ಕುಟುಂಬದ ಇಬ್ಬರಿಗೆ ಟಿಕೆಟ್ ನೀಡುವುದಕ್ಕೆ ಅವಕಾಶವನ್ನು ನೀಡುವುದಿಲ್ಲ. ಹೀಗಾಗಿ ಅವರ ಪತ್ನಿಗೆ ಸೀಟು ಸಿಗುವುದು ಸಹ ಗಗನ ಕುಸುಮ.
 
ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಸಿಧು ಕಾಂಗ್ರೆಸ್ ಸೇರಿದಂತೆ ಇತರ ಪಕ್ಷವನ್ನು ಸೇರುವ ದಾರಿಯನ್ನು ಸಹ ತೆರೆದಿಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments