Webdunia - Bharat's app for daily news and videos

Install App

ರಾಹುಲ್ ರ‍್ಯಾಲಿಯಲ್ಲಿ ಮೋದಿ ಮೊರೆತ

Webdunia
ಸೋಮವಾರ, 13 ಫೆಬ್ರವರಿ 2017 (10:42 IST)
ಉತ್ತರಾಖಂಡ್ ವಿಧಾನಸಭಾ ಚುನಾವಣೆಯ ನಿಮಿತ್ತ ನಿನ್ನೆ ಹರಿದ್ವಾರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಜುಗರಕ್ಕೀಡಾದ ಪ್ರಸಂಗ ನಡೆಯಿತು. ಕಾಂಗ್ರೆಸ್ ರೋಡ್ ಶೋನಲ್ಲಿ ಬಿಜೆಪಿ ಪರ ಘೋಷಣೆ ಮೊಳಗಿದೆ.
ನಗರದ ನುಕ್ಕಡ್ ಸಭಾದಲ್ಲಿ ನಿನ್ನೆ ರಾಹುಲ್ ಗಾಂಧಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುತ್ತಿದ್ದಾಗ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಬಿಜೆಪಿ ಬೆಂಬಲಿಗರು ಬಿಜೆಪಿ ಧ್ವಜವನ್ನು ಪ್ರದರ್ಶಿಸಿದ್ದಲ್ಲದೆ ಪ್ರಧಾನಿ ಮೋದಿ ಪರ ಘೋಷಣೆ ಮೊಳಗಿಸಿದರು. ಇದು ರಾಹುಲ್‌ಗೆ ಇರಿಸುಮುರಿಸುಂಟು ಮಾಡಿತು. ಈ ದೃಶ್ಯಾವಳಿಗಳೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿವೆ.
 
 
ಇನ್ನೊಂದೆಡೆ ಪ್ರಧಾನಿ ಮೋದಿ ಸಹ ರಾಜ್ಯದ ಶ್ರೀನಗರದಲ್ಲಿ ಪ್ರಚಾರವನ್ನು ಕೈಗೊಂಡು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ದೇಶವನ್ನು ಲೂಟಿ ಮಾಡಿದವರು ಆ ಸಂಪತ್ತನ್ನು ಮರಳಿಸುವವರೆಗೆ ನಾನು ವಿರಮಿಸುವುದಿಲ್ಲ. ಅವರು ಶಾಂತಿಯಿಂದ ಇರಲು ಅವಕಾಶ ನೀಡುವುದಿಲ್ಲ ಎಂದು ಗರ್ಜಿಸಿದರು. 
 
ಜನರ ಭವಿಷ್ಯ ಹಾಳು ಮಾಡಿದವರಿಗೆ ರಾಜ್ಯದ ಜನರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕು ಎಂದು ಅವರು ಕರೆ ನೀಡಿದರು.
 
ಉತ್ತರಾಖಂಡದಲ್ಲಿ ಫೆಬ್ರವರಿ 15 ರಂದು ಚುನಾವಣೆ ನಡೆಯಲಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments