Webdunia - Bharat's app for daily news and videos

Install App

ರಾಹುಲ್ ರ‍್ಯಾಲಿಯಲ್ಲಿ ಮೋದಿ ಮೊರೆತ

Webdunia
ಸೋಮವಾರ, 13 ಫೆಬ್ರವರಿ 2017 (10:42 IST)
ಉತ್ತರಾಖಂಡ್ ವಿಧಾನಸಭಾ ಚುನಾವಣೆಯ ನಿಮಿತ್ತ ನಿನ್ನೆ ಹರಿದ್ವಾರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಜುಗರಕ್ಕೀಡಾದ ಪ್ರಸಂಗ ನಡೆಯಿತು. ಕಾಂಗ್ರೆಸ್ ರೋಡ್ ಶೋನಲ್ಲಿ ಬಿಜೆಪಿ ಪರ ಘೋಷಣೆ ಮೊಳಗಿದೆ.
ನಗರದ ನುಕ್ಕಡ್ ಸಭಾದಲ್ಲಿ ನಿನ್ನೆ ರಾಹುಲ್ ಗಾಂಧಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುತ್ತಿದ್ದಾಗ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಬಿಜೆಪಿ ಬೆಂಬಲಿಗರು ಬಿಜೆಪಿ ಧ್ವಜವನ್ನು ಪ್ರದರ್ಶಿಸಿದ್ದಲ್ಲದೆ ಪ್ರಧಾನಿ ಮೋದಿ ಪರ ಘೋಷಣೆ ಮೊಳಗಿಸಿದರು. ಇದು ರಾಹುಲ್‌ಗೆ ಇರಿಸುಮುರಿಸುಂಟು ಮಾಡಿತು. ಈ ದೃಶ್ಯಾವಳಿಗಳೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿವೆ.
 
 
ಇನ್ನೊಂದೆಡೆ ಪ್ರಧಾನಿ ಮೋದಿ ಸಹ ರಾಜ್ಯದ ಶ್ರೀನಗರದಲ್ಲಿ ಪ್ರಚಾರವನ್ನು ಕೈಗೊಂಡು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ದೇಶವನ್ನು ಲೂಟಿ ಮಾಡಿದವರು ಆ ಸಂಪತ್ತನ್ನು ಮರಳಿಸುವವರೆಗೆ ನಾನು ವಿರಮಿಸುವುದಿಲ್ಲ. ಅವರು ಶಾಂತಿಯಿಂದ ಇರಲು ಅವಕಾಶ ನೀಡುವುದಿಲ್ಲ ಎಂದು ಗರ್ಜಿಸಿದರು. 
 
ಜನರ ಭವಿಷ್ಯ ಹಾಳು ಮಾಡಿದವರಿಗೆ ರಾಜ್ಯದ ಜನರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕು ಎಂದು ಅವರು ಕರೆ ನೀಡಿದರು.
 
ಉತ್ತರಾಖಂಡದಲ್ಲಿ ಫೆಬ್ರವರಿ 15 ರಂದು ಚುನಾವಣೆ ನಡೆಯಲಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments