Select Your Language

Notifications

webdunia
webdunia
webdunia
webdunia

ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು
ಕೊಯಮತ್ತೂರು , ಬುಧವಾರ, 7 ಮಾರ್ಚ್ 2018 (14:10 IST)
ಕೊಯಮತ್ತೂರು: ತ್ರಿಪುರಾದಲ್ಲಿ  ಲೆನಿನ್ ಪ್ರತಿಮೆ ಮತ್ತು ವೆಲ್ಲೂರ್ ನಲ್ಲಿ ಪೆರಿಯಾರ್ ಪ್ರತಿಮೆಯನ್ನು ನೆಲಕ್ಕುರುಳಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಸೇಡು ತೀರಿಸಿಕೊಳ್ಳಲು ಕೊಯಮತ್ತೂರಿನಲ್ಲಿ ಇಂದು ಬಿಜೆಪಿ ಕಚೇರಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.

ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದುಷ್ಕರ್ಮಿಗಳ ಗುಂಪೊಂದು ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸುತ್ತಿರುವುದು ಸ್ಪಷ್ಟವಾಗಿದೆ. ಆದರೆ ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಲಪಾಡ್ ನ್ಯಾಯಾಂಗ ಬಂಧನ ಮಾ.21ರವರೆಗೆ ವಿಸ್ತರಣೆ; ಕೋರ್ಟ್ ಆದೇಶ