Webdunia - Bharat's app for daily news and videos

Install App

ಪೈಲಟ್ಗೆ ಹೃದಯಾಘಾತ : ಬಾಂಗ್ಲಾ ವಿಮಾನ ನಾಗ್ಪುರದಲ್ಲಿ ತುರ್ತು ಭೂ ಸ್ಪರ್ಶ

Webdunia
ಶನಿವಾರ, 28 ಆಗಸ್ಟ್ 2021 (11:49 IST)
ನಾಗ್ಪುರ, ಆ.28 :  ಬಾಂಗ್ಲಾ ದೇಶದ ಬಿಮನ್ ಏರ್ಲೈನ್ ವಿಮಾನ ನಾಗ್ಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ. ಮಸ್ಮತ್ನಿಂದ ಬಾಂಗ್ಲಾ ದೇಶದ ರಾಜಧಾನಿ ಢಾಕಾಗೆ ವಿಮಾನದ ಪೈಲಟ್ಗೆ ಹೃದಯಾಘಾತಕ್ಕೊಳಗಾಗಿ ನಾಗ್ಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ್ದು , ತಕ್ಷಣ ಸಿಬ್ಬಂದಿಗಳು ಸ್ಪಂದಿಸಿದ್ದಾರೆ.

ಸುಮಾರು 126 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಕಳೆದ ರಾತ್ರಿ 11.40ರ ಸುಮಾರಿಗೆ ಏಕಾಏಕಿ ನಿಯಂತ್ರಣಗೊಂಡಿತ್ತು. ಏನಾಯಿತು ಎಂದು ತಿಳಿಯುವ ಬಗ್ಗೆ ವರದಿ ಬಂದು ಪೈಲೆಟ್ಗೆ ಹೃದಯಾಘಾತವಾಗಿದೆ. ಯಾರೂ ಆತಂಕಗೊಳ್ಳಬೇಡಿ ಎಂದು ತಿಳಿಸಲಾಯಿತು. ಸುಮಾರು 11 ಗಂಟೆಗೆ ಕಾಲ ಪ್ರಯಾಣಿಕರು ವಿಮಾನದಲ್ಲೇ ಸಿಲುಕಿ ಕೆಲವರು ಗಾಬರಿಗೊಂಡಿದ್ದರು.
ಈ ಸಂಬಂಧ ನಾಗ್ಪುರ ವಿಮಾನ ನಿಲ್ದಾಣ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು , ಬಿಮಾನ್ ಏರ್ಲೈನ್ ತುರ್ತು ಭೂ ಸ್ಪರ್ಶಕ್ಕೆ ಮನವಿ ಮಾಡಿದ ನಂತರ ನಾವು ಎಲ್ಲಾ ಎಚ್ಚರಿಕೆ ವಹಿಸಿ ಪರಿಸ್ಥಿತಿ ನಿಭಾಯಿಸಿದ್ದೇವೆ. ಪೈಲೆಟ್ ಸ್ಥಿತಿ ಗಂಭೀರವಾಗಿತ್ತು. ತಕ್ಷಣ ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವಿಮಾನ ರಾಯಪುರದ ಬಳಿ ಇದ್ದಾಗ ಸಹ ಪೈಲೆಟ್ ಕೊಲ್ಕೊತ್ತಾದ ಎಟಿಸಿಗೆ ಮಾಹಿತಿ ನೀಡಿ ಭಾರತದಲ್ಲಿ ಇಳಿಯಲು ಅನುಮತಿ ಕೇಳಿದ್ದರು. ಅದಕ್ಕೆ ಸ್ಪಂದಿಸಲಾಯಿತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments