Select Your Language

Notifications

webdunia
webdunia
webdunia
webdunia

ಏನಾದರೂ ಸರಿಯೇ ರೇಪ್ ಕೃತ್ಯಗಳನ್ನು ಕಂಟ್ರೋಲ್ ಮಾಡಿ: ಮೋದಿಗೆ ಮೊರೆಯಿಟ್ಟ ಮಮತಾ ಬ್ಯಾನರ್ಜಿ

ಏನಾದರೂ ಸರಿಯೇ ರೇಪ್ ಕೃತ್ಯಗಳನ್ನು ಕಂಟ್ರೋಲ್ ಮಾಡಿ: ಮೋದಿಗೆ ಮೊರೆಯಿಟ್ಟ ಮಮತಾ ಬ್ಯಾನರ್ಜಿ

Sampriya

ನವದೆಹಲಿ , ಗುರುವಾರ, 22 ಆಗಸ್ಟ್ 2024 (19:19 IST)
Photo Courtesy X
ನವದೆಹಲಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಗದ್ದಲದ ನಡುವೆಯೇ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು, ಅತ್ಯಾಚಾರ ಪ್ರಕರಣವನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಿ ಎಂದಿದ್ದಾರೆ.

ದೇಶದಾದ್ಯಂತ ನಿರಂತರವಾಗಿ ಮತ್ತು ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಬ್ಯಾನರ್ಜಿ ಅವರು ಪ್ರಧಾನಿಯವರ ಗಮನಕ್ಕೆ ತಂದಿದ್ದಾರೆ

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಪ್ರತಿಭಟನೆ ಮತ್ತು ಆಕ್ರೋಶದ ನಡುವೆಯೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅತ್ಯಾಚಾರ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಬ್ಯಾನರ್ಜಿಯ ಮುಖ್ಯ ಸಲಹೆಗಾರ ಅಲಾಪನ್ ಬಂಡೋಪಾಧ್ಯಾಯ ಅವರು ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ. ದೇಶದಾದ್ಯಂತ ನಿರಂತರವಾಗಿ ಮತ್ತು ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಬ್ಯಾನರ್ಜಿ ಅವರು ಪ್ರಧಾನಿಯವರ ಗಮನಕ್ಕೆ ತಂದಿದ್ದಾರೆ ಎಂದು ಬಂದೋಪಾಧ್ಯಾಯ ಹೇಳಿದರು.

ದೇಶಾದ್ಯಂತ ಪ್ರತಿದಿನ ಸುಮಾರು 90 ಅತ್ಯಾಚಾರ ಪ್ರಕರಣಗಳು ಸಂಭವಿಸುತ್ತಿವೆ ಎಂದು ಉಲ್ಲೇಖಿಸಿದ ಬ್ಯಾನರ್ಜಿ, ಇದು ಸಮಾಜ ಮತ್ತು ರಾಷ್ಟ್ರದ ಆತ್ಮವಿಶ್ವಾಸ ಮತ್ತು ಆತ್ಮಸಾಕ್ಷಿಯನ್ನು ಅಲುಗಾಡಿಸುತ್ತದೆ ಎಂದು ಹೇಳಿದರು. ಅಂತಹ ಘೋರ ಅಪರಾಧಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದರು.

ಅಂತಹ ಪ್ರಕರಣಗಳಲ್ಲಿ ತ್ವರಿತ ವಿಚಾರಣೆಗಾಗಿ ತ್ವರಿತಗತಿಯ ವಿಶೇಷ ನ್ಯಾಯಾಲಯಗಳ ಸ್ಥಾಪನೆಯನ್ನು ಪ್ರಸ್ತಾವಿತ ಶಾಸನದಲ್ಲಿ ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪರಿಗಣಿಸಬೇಕು, ಅಂತಹ ಪ್ರಕರಣಗಳ ವಿಚಾರಣೆಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಬೇಕು ಎಂದು ಬ್ಯಾನರ್ಜಿ ಬರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಚಾಪ್ಟರ್‌ಗಳಿಂದ ಪ್ಯಾನ್ ಇಂಡಿಯಾ ಸಿನಿಮಾನೇ ಮಾಡ್ಬೋದು: ಕುಮಾರಸ್ವಾಮಿ