Webdunia - Bharat's app for daily news and videos

Install App

ಗುಜರಾತ್ ಚುನಾವಣೆಗೆ ಹೆದರಿದ ಪ್ರಧಾನಿ ಮೋದಿ, ಬಿಜೆಪಿ: ರಾಹುಲ್ ಗಾಂಧಿ

Webdunia
ಸೋಮವಾರ, 4 ಸೆಪ್ಟಂಬರ್ 2017 (16:58 IST)
ಗುಜರಾತ್ ಮಾದರಿಯ ಶೂನ್ಯತೆಯ ಬಗ್ಗೆ ರಾಜ್ಯದ ಜನತೆಗೆ ಅರಿವಾಗಿದ್ದರಿಂದ ಮುಂಬರುವ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರಧಾನಿ ಮೋದಿ ಮತ್ತು ಅಡಳಿತರೂಢ ಬಿಜೆಪಿಗೆ ಹೆದರಿಕೆಯಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ   
ಅಹ್ಮದಾಬಾದ್‌ನ ಸಬರಮತಿ ನದಿಯ ದಂಡೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸತ್ಯವನ್ನು ಮರೆಮಾಚಲು ಸಾದ್ಯವಿಲ್ಲ. ಮೋದಿ ಸರಕಾರದಿಂದ ಯುವಕರು, ರೈ,ತರು ಮತ್ತು ಸಣ್ಣ ಉದ್ಯಮಿಗಳಿಗೆ ಯಾವುದೇ ಲಾಭವಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಉದ್ಘಾಟಿಸಿದ ರಾಹುಲ್ , 22 ವರ್ಷಗಳ ಅಂತರದ ನಂತರ ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಕಾರ ರಚಿಸಲಿದೆ. ಕಾಂಗ್ರೆಸ್ ಪಕ್ಷ ಸರಕಾರ ರಚಿಸುವುದನ್ನು ತಡೆಯುವುದು ಯಾರಿಂದಲೂ ಸಾಧ್ಯವಿಲ್ಲ ಎಂದರು.
 
ರಾಹುಲ್ ಗಾಂಧಿಯವರೊಂದಿಗೆ ಹಿರಿಯ ಕಾಂಗ್ರೆಸ್ ಮುಖಂಡರಾದ ಅಶೋಕ್ ಗೆಹ್ಲೋಟ್, ಅಹ್ಮದ್ ಪಟೇಲ್, ಮಧುಸೂಧನ್ ಮಿಸ್ತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭಾರತ್‌ಸಿನ್ಹಾ ಸೋಳಂಕಿ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments