Webdunia - Bharat's app for daily news and videos

Install App

ಮುಂಗಾರು ಅಧಿವೇಶನದಲ್ಲಿ ಜಿಎಸ್‌ಟಿ ಅಂಗೀಕಾರವಾಗುವ ವಿಶ್ವಾಸ: ಪ್ರಧಾನಿ ಮೋದಿ

Webdunia
ಸೋಮವಾರ, 18 ಜುಲೈ 2016 (12:55 IST)
ಮುಂಗಾರು ಅಧಿವೇಶನದಲ್ಲಿ ಮಹತ್ವದ ನಿರ್ಧಾರಗಳ ಕುರಿತಂತೆ ಎಲ್ಲಾ ಪಕ್ಷಗಳು ಒಂದಾಗಿ ಒಮ್ಮತದಿಂದ ಕಾರ್ಯನಿರ್ವಹಿಸುತ್ತವೆ ಎನ್ನುವ ಆಶಾಭಾವನೆ ಹೊಂದಿದ್ದೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
 
70ನೇ ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳ ಮುಂಚೆ ಮುಂಗಾರು ಅಧಿವೇಶನ ಆರಂಭವಾಗಲಿರುವುದರಿಂದ, ಸಂಸತ್ತಿನಲ್ಲಿ ಮಹತ್ವದ ಮಸೂದೆಗಳಿಗೆ ಅಂಗೀಕಾರ ದೊರೆಯುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 
 
ಇಂದು ಮುಂಗಾರು ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಸಂಸತ್ತಿನ ಹೊರ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಕಳೆದ ಕೆಲ ದಿನಗಳಿಂದ ವಿಪಕ್ಷಗಳೊಂದಿಗೆ ಚರ್ಚೆ ನಡೆಸಿ ಸಹಮತಕ್ಕೆ ಬಂದಿದ್ದೇವೆ. ಆದ್ದರಿಂದ, ಅಧಿವೇಶನದಲ್ಲಿ ಉತ್ತಮ ನಿರ್ಧಾರಗಳನ್ನು ಕೈಗೊಂಡು ವೇಗವಾಗಿ ಅಭಿವೃದ್ಧಿಪಥದಲ್ಲಿ ಸಾಗಬೇಕಾಗಿದೆ ಎಂದರು.
 
ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿರುವವರನ್ನು ಸ್ಮರಿಸಿದ ಮೋದಿ, ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಿ ಕಾರ್ಯನಿರ್ವಹಿಸಿ, 70 ವರ್ಷಗಳ ಸ್ವಾತಂತ್ರ್ಯದ ಅನುಭವಕ್ಕೆ ಹೊಸ ಮೆರಗು ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
 
ಕೇಂದ್ರ ಸರಕಾರದ ಹಿರಿಯ ಸಚಿವರುಗಳು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಜಿಎಸ್‌ಟಿ ಮಸೂದೆಗೆ ಅಂಗೀಕಾರ ದೊರೆಯುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
 
ಏತನ್ಮಧ್ಯೆ, ಅರುಣಾಚಲ ಪ್ರದೇಶದಲ್ಲಿದ್ದ ಕಾಂಗ್ರೆಸ್ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು, ಕಾಶ್ಮಿರ ಬಿಕ್ಕಟ್ಟು, ಎನ್‌‍ಎಸ್‌ಜಿ ಸದಸ್ಯತ್ವ ಪಡೆಯುವಲ್ಲಿ ವಿಫಲತೆ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments