Webdunia - Bharat's app for daily news and videos

Install App

ಪಿಎಂ ಇಂಟರ್ನ್ ಶಿಪ್ ಯೋಜನೆಗೆ ಚಾಲನೆ: 5 ಸಾವಿರ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (10:14 IST)
ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಣೆ ಮಾಡಿರುವ ಪಿಎಂ ಇಂಟರ್ನ್ ಶಿಪ್ ಯೋಜನೆ ಚಾಲನೆಗೆ ಬಂದಿದ್ದು, ಇದಕ್ಕೆ ಅರ್ಜಿ ಹಾಕುವುದು ಹೇಗೆ ಎಂದು ವಿವರಕ್ಕಾಗಿ ಇಲ್ಲಿ ನೋಡಿ.

ಇತ್ತೀಚೆಗೆ ಕೇಂದ್ರ ಬಜೆಟ್ ನಲ್ಲಿ ಉನ್ನತ ಕಂಪನಿಗಳಲ್ಲಿ ಇಂಟರ್ನ್ ಶಿಪ್ ಮಾಡುವ ಯುವಕ-ಯುವತಿಯರಿಗೆ ಮಾಸಿಕ 5,000 ರೂ. ಇಂಟರ್ನ್ ಶಿಪ್ ನೀಡುವ ಬಗ್ಗೆ ಘೋಷಣೆ ಮಾಡಿತ್ತು. ಈ ಯೋಜನೆಗೆ ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆ ಎನ್ನಲಾಗಿದ್ದು, ಇದಕ್ಕೆ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಮಾಸಿಕ 5 ಸಾವಿರ ರೂ.ನಂತೆ ವರ್ಷಕ್ಕೆ ಇಂಟರ್ನ್ ಶಿಪ್ ಮಾಡುವ ಯುವಕ-ಯುವತಿಯರಿಗೆ 66 ಸಾವಿರ ರೂ. ಸಿಗಲಿದೆ. ಸುಮಾರು 1.25 ಲಕ್ಷ ಯುವಕ-ಯುವತಿಯರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಪ್ರೋತ್ಸಾಹ ಧನದ ಜೊತೆಗೆ ಉದ್ಯೋಗ ಕೌಶಲ್ಯ ಹೆಚ್ಚಿಸುವುದು ಯೋಜನೆಯ ಉದ್ದೇಶವಾಗಿದೆ.

21 ರಿಂದ 24 ವರ್ಷದೊಳಗಿನ ಇಂಟರ್ನ್ ಶಿಪ್ ಮಾಡುವ ಕನಿಷ್ಠ 10 ನೇ ತರಗತಿ ಪೂರ್ಣಗೊಳಿಸಿರುವ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು. ಅಥವಾ ಐಐಟಿ, ಡಿಪ್ಲೊಮಾ, ಬಿಎ, ಬಿಎಸ್ ಸಿ ಅಥವಾ ಬಿಕಾಂ ಪದವೀಧರರೂ ಸಲ್ಲಿಸಬಹುದು. ಸರ್ಕಾರಿ ಉದ್ಯೋಗದಲ್ಲಿರುವ ಕುಟುಂಬದವರು, ಆದಾಯ ತೆರಿಗೆ ಸಲ್ಲಿಸುವವರು ಅರ್ಜಿ ಸಲ್ಲಿಸುವ ಹಾಗಿಲ್ಲ. ಅಕ್ಟೋಬರ್ 12 ರಿಂದ 25 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಅಕ್ಟೋಬರ್ 26 ರಂದು ಅರ್ಹ ಅರ್ಜಿಗಳ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಅಕ್ಟೋಬರ್ 27 ರಿಂದ ನವಂಬರ್ 7 ರವರೆಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ನವಂಬರ್ 15 ರಿಂದ ಆಯ್ಕೆಯಾದ ಅಭ್ಯರ್ಥಿಗಳು ಕಂಪನಿಗಳಿಂದ ಆಫರ್ ಲೆಟರ್ ಪಡೆಯಲಿದ್ದಾರೆ. ಕೇಂದ್ರ ಸರ್ಕಾರದಿಂದ 4,500 ರೂ. ಮತ್ತು ಕಂಪನಿಗಳಿಂದ 5,000 ರೂ. ವೇತನ ಸಿಗಲಿದೆ. https://pminternship.mca.gov.in/login/ ಎಂಬ ವೆಬ್ ಸೈಟ್ ನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments