Webdunia - Bharat's app for daily news and videos

Install App

ಪಿಎಂ ಕಿಸಾನ್ ಹಣ ಬರಬೇಕಾ, ಈ ಒಂದು ಕೆಲಸ ಮಾಡುವುದು ಕಡ್ಡಾಯ

Krishnaveni K
ಶನಿವಾರ, 11 ಜನವರಿ 2025 (11:09 IST)
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 6,000 ರೂ. ಸಿಗುತ್ತಿದೆ. ಆದರೆ ಇನ್ನು ಮುಂದೆ ಈ ಹಣ ನಿಮ್ಮ ಖಾತೆಗೆ ಬರಬೇಕಾದರೆ ಈ ಒಂದು ಕೆಲಸ ಮಾಡಲೇಬೇಕು.

ಇನ್ನು ಮುಂದೆ ಈ ಯೋಜನೆಯಡಿ ಹಣ ಪಡೆಯಲು ರೈತ ಗುರುತಿನ ಚೀಟಿ ಕಡ್ಡಾಯವಾಗಿದೆ. ಕೇಂದ್ರ ಸರ್ಕಾರ ಇಂತಹದ್ದೊಂದು ಹೊಸ ನಿಯಮ ಜಾರಿಗೆ ತಂದಿದೆ. ಸದ್ಯಕ್ಕೆ ಇದು ಕೆಲವೇ ರಾಜ್ಯಗಳಲ್ಲಿ ಪ್ರಾಯೋಗಿಕವಾಗಿದ್ದು, ಮುಂದೆ ಕರ್ನಾಟಕದಲ್ಲೂ ಈ ನಿಯಮ ಕಡ್ಡಾಯವಾಗಲಿದೆ.

ಕೇಂದ್ರ ಕೃಷಿ ಮತ್ತು ರೈತರ ಕ್ಷೇಮಾಭಿವೃದ್ಧಿ ಇಲಾಖೆ ಆದೇಶದ ಪ್ರಕಾರ, ರೈತರ ಗುರುತಿನ ಚೀಟಿಯು ಅರ್ಜಿದಾರ ಕೃಷಿ ಭೂಮಿ ಹೊಂದಿರುವುದನ್ನು ದೃಢಪಡಿಸುವುದು ಕಾರಣ, ನೋಂದಣಿ ಪ್ರಕ್ರಿಯೆಯೂ ಸುಲಭವಾಗುತ್ತದೆ. ಹೀಗಾಗಿ ಎಲ್ಲಾ ಹೊಸ ಅರ್ಜಿದಾರರೂ ಫಾರ್ಮರ್ಸ್ ರಿಜಿಸ್ಟ್ರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ.

ಸದ್ಯಕ್ಕೆ ಇದನ್ನು 10 ರಾಜ್ಯಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಸದ್ಯಕ್ಕೆ ಇದು ಕರ್ನಾಟಕದಲ್ಲಿ ಕಡ್ಡಾಯವಲ್ಲ. ಆದರೆ ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲೂ ಇದು ಕಡ್ಡಾಯವಾಗಲಿದೆ. ಹೀಗಾಗಿ ಈ ಕೆಲಸ ಇಂದೇ ಮಾಡಿದರೆ ಉತ್ತಮ.

ರೈತ ಗುರುತಿನ ಚೀಟಿ ಎಂದರೇನು
ಕಿಸಾನ್ ಪೆಹಚಾನ್ ಕಾರ್ಡ್ ಅಥವಾ ರೈತ ಗುರುತಿನ ಚೀಟಿ  ಎಂದರೆ ರಾಜ್ಯಗಳ ಭೂ ದಾಖಲೆಗಳೊಂದಿಗೆ ಲಿಂಕ್ ಆಗಿರುವ ಆಧಾರ್ ರೀತಿಯ ಡಿಜಿಟಲ್ ಕಾರ್ಡ್ ಆಗಿದೆ. ಇದರಲ್ಲಿ ರೈತನ ಭೂಮಿ ಸೇರಿದಂತೆ ಎಲ್ಲಾ ಮಾಹಿತಿಗಳೂ ಇರುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments