Webdunia - Bharat's app for daily news and videos

Install App

PM ಕಿಸಾನ್ ಸಮ್ಮಾನ್ ನಿಧಿ ಹಣ ಬರಬೇಕೆಂದರೆ ಈ ಒಂದು ಕೆಲಸ ಮಾಡಬೇಕು

Krishnaveni K
ಶುಕ್ರವಾರ, 6 ಡಿಸೆಂಬರ್ 2024 (09:18 IST)
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ 19 ನೇ ಕಂತಿನ ಹಣ ಖಾತೆಗೆ ಬರಬೇಕು ಎಂದರೆ ಈ ಒಂದು ಕೆಲಸ ಮಾಡಲು ಸರ್ಕಾರ ಸೂಚನೆ ನೀಡಿದೆ. ರೈತರು ಕೆಲವೊಂದು ಅರ್ಹತಾ ಮಾನದಂಡಗಳನ್ನು ಪೂರೈಸಬೇಕು.

ಇನ್ನು ಮುಂದೆ ರೈತ ನೋಂದಣಿಯಲ್ಲಿ ನೊಂದಾಯಿಸಿಕೊಂಡ ರೈತರಿಗೆ ಮಾತ್ರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭ ಸಿಗಲಿದೆ. ಮುಂದಿನ ವರ್ಷ ಅಂದರೆ ಜನವರಿ 1 ರಿಂದ ರೈತ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇಲ್ಲದೇ ಹೋದರೆ ಕಿಸಾನ್ ನಿಧಿ ಹಣ ಬರಲ್ಲ.

ರೈತರಿಗೆ ಕೇಂದ್ರದ ಮೋದಿ ಸರ್ಕಾರವು ಪ್ರತಿ ವರ್ಷ ರೂ.6000 ರಷ್ಟು ಹಣವನ್ನು ಮೂರು ಕಂತುಗಳಲ್ಲಾಗಿ ನೇರವಾಗಿ ಖಾತೆಗೆ ಜಮೆ ಮಾಡುತ್ತದೆ. ಈಗಾಗಲೇ 18 ಕಂತುಗಳ ಹಣ ಬಿಡುಗಡೆಯಾಗಿದೆ. ಇದೀಗ 19 ನೇ ಕಂತಿನ ಹಣ ಬಿಡುಗಡೆಯಾಗಬೇಕಿದೆ.ಇದಕ್ಕೆ ಮೊದಲು ಫಲಾನುಭವಿ ರೈತರು ಪಿಎಂ ಕಿಸಾನ್ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು.

ನೋಂದಣಿ ಮಾಡುವುದು ಹೇಗೆ?
pmkisan.gov.in ಎಂಬ ವೆಬ್ ಸೈಟ್ ಗೆ ಹೋಗಿ ಕೆಳಗೆ ಸ್ಕ್ರಾಲ್ ಮಾಡಿದರೆ ಫಲಾನುಭವಿಗಳ ಪಟ್ಟಿ ಆಯ್ಕೆ ಸಿಗುತ್ತದೆ. ಇದನ್ನು ಕ್ಲಿಕ್ ಮಾಡಿ ನಿಮ್ಮ ಎಲ್ಲಾ ಮಾಹಿತಿಯನ್ನು ನೀಡಿ. ಎಲ್ಲಾ ಮಾಹಿತಿ ನೀಡಿದ ಬಳಿಕ ಗೆಟ್ ರಿಪೋರ್ಟ್ ಎನ್ನುವ ಬಟನ್ ಕ್ಲಿಕ್ ಮಾಡಿ. ಈಗ ಫಲಾನುಭವಿಗಳ ಪಟ್ಟಿ ನಿಮ್ಮ ಮುಂದೆ ತೆರೆಯುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ 19 ನೇ ಕಂತಿಗೆ ಅರ್ಹರಾಗಿರುತ್ತೀರಿ.

ಒಂದು ವೇಳೆ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳದೇ ಇದ್ದರೆ ತಕ್ಷಣವೇ ಹೆಸರು ನೊಂದಾಯಿಸಿಕೊಂಡು ಯೋಜನೆಯ ಲಾಭ ಪಡೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments