ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

Krishnaveni K
ಶುಕ್ರವಾರ, 15 ಆಗಸ್ಟ್ 2025 (09:00 IST)
Photo Credit: X
ನವದೆಹಲಿ: 79 ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಇಂದು ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಅಣ್ವಸ್ತ್ರ ಬೆದರಿಕೆ ಹಾಕುತ್ತಿರುವ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಪ್ರಧಾನಿ ಮೋದಿ ಆಪರೇಷನ್ ಸಿಂಧೂರ್, ಆತ್ಮನಿರ್ಭರತೆ ಬಗ್ಗೆ ವಿಶೇಷವಾಗಿ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್ ನಲ್ಲಿ ಭಾಗಿಯಾದ ಸೈನಿಕರಿಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ. ಸಿಂಧೂರ ಅಳಿಸಲು ಬಂದ ಉಗ್ರರಿಗೆ ತಕ್ಕ ಪಾಠ ಕಲಿಸಿದ್ದಾಗಿ ಹೇಳಿದ್ದಾರೆ.

ಇನ್ನು, ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಪಾಕಿಸ್ತಾನದ ಅಣ್ವಸ್ತ್ರ ಬೆದರಿಕೆಗೆಲ್ಲಾ ನಾವು ಜಗ್ಗಲ್ಲ ಎಂದಿದ್ದಾರೆ. ಮೊನ್ನೆಯಷ್ಟೇ ಪಾಕ್ ಸೇನಾ ಮುಖ್ಯಸ್ಥ ಜನರಲ್ ಆಸಿಫ್ ಮುನೀರ್ ಭಾರತದ ವಿರುದ್ಧ ಅಣ್ವಸ್ತ್ರ ಬಳಕೆ ಮಾಡುವ ಬೆದರಿಕೆ ಹಾಕಿದ್ದರು. ಇದಕ್ಕೆ ಇಂದು ತಿರುಗೇಟು ನೀಡಿರುವ ಪ್ರಧಾನಿ ಮೋದಿ ಇಂತಹ ಬೆದರಿಕೆಗಳಿಗೆ ತಕ್ಕ ಉತ್ತರ ನೀಡಲು ನಮ್ಮ ಸೇನೆ ಸನ್ನದ್ಧವಾಗಿದೆ. ನಮ್ಮ ಸೇನೆಗೆ ಯಾವ ಕ್ಷಣದಲ್ಲಿ, ಎಲ್ಲಿ ಬೇಕಾದರೂ, ಹೇಗೆ ಬೇಕಾದರೂ ದಾಳಿ ಮಾಡಲು ಅಧಿಕಾರ ನೀಡಲಾಗಿದೆ. ಇಂತಹ ಬೆದರಿಕೆಗಳೆಲ್ಲಾ ನಮ್ಮ ಮುಂದೆ ನಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ತಮ್ಮ ಭಾಷಣದಲ್ಲಿ ಆತ್ಮನಿರ್ಭರ ಭಾರತದ ಬಗ್ಗೆ ಮೋದಿ ವಿಶೇಷವಾಗಿ ಮಾತನಾಡಿದ್ದಾರೆ. ನಮ್ಮ ವಸ್ತುಗಳನ್ನು ನಾವೇ ಉತ್ಪಾದನೆ ಮಾಡುವಷ್ಟು, ಕಡಿಮೆ ದರದಲ್ಲಿ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವಷ್ಟು ನಾವು ಸಮರ್ಥರಾಗಬೇಕು ಎಂದು ಯುವ ಜನತೆಗೆ ಕರೆ ನೀಡಿದ್ದಾರೆ.

ರೈತರಿಗೆ ಯಾವುದೇ ಸಮಸ್ಯೆ ಬಂದರೂ ಗೋಡೆಯಂತೆ ನಾನಿದ್ದೇನೆ ಎಂದು ಅಭಯ ನೀಡಿದ್ದಾರೆ. ಯಾವುದೇ ರಾಜಕೀಯ ಪಕ್ಷ ಬೇಧವಿಲ್ಲದೇ ನಮ್ಮ ದೇಶವನ್ನು ಅಭಿವೃದ್ಧಿಯತ್ತ ಮುಂದೆ ತರಬೇಕು ಎಂಬುದೇ ನಮ್ಮೆಲ್ಲರ ಗುರಿಯಾಗಿರಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments