ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

Krishnaveni K
ಶುಕ್ರವಾರ, 15 ಆಗಸ್ಟ್ 2025 (12:14 IST)
ನವದೆಹಲಿ: 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಪ್ರಧಾನಿ ಮೋದಿ ಮಿಷನ್ ಸುದರ್ಶನ ಚಕ್ರ ಘೋಷಿಸಿದ್ದಾರೆ. ಹೀಗೆಂದರೇನು ಇಲ್ಲಿದೆ ವಿವರ.

ಇಂದು ಕೆಂಪು ಕೋಟೆಯಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ ಆಪರೇಷನ್ ಸಿಂಧೂರ್, ದೇಶದ ಭದ್ರತೆ ಬಗ್ಗೆ ವಿಶೇಷವಾಗಿ ಮಾತನಾಡಿದ್ದಾರೆ. ಈ ವೇಳೆ ದೇಶದ ಭದ್ರತೆಗಾಗಿ ಮಿಷನ್ ಸುದರ್ಶನ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಶತ್ರುರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಮಿಷನ್ ಸುದರ್ಶನ್ ಎಂದರೆ ಶ್ರೀಕೃಷ್ಣನ ಸುದರ್ಶನ ಚಕ್ರದಂತೆ ದೇಶದ ರಕ್ಷಣಾ ವ್ಯವಸ್ಥೆಯಾಗಲಿದೆ. ದೇಶದ ಸುತ್ತೂ ಶತ್ರುಗಳ ದಾಳಿಯಾಗದಂತೆ ರಕ್ಷಣೆ ಒದಗಿಸುವುದಾಗಿದೆ. ಇದು ದೇಶ ರಕ್ಷಿಸುವುದಲ್ಲದೆ, ಶತ್ರುಗಳನ್ನು ನಾಶ ಮಾಡುತ್ತದೆ. ಮಹಾಭಾರತ ಯುದ್ಧ ನಡೆಯುತ್ತಿರುವಾಗ ಶ್ರೀಕೃಷ್ಣನು ಸುದರ್ಶನ ಚಕ್ರದಿಂದ ಸೂರ್ಯನ ಬೆಳಕನ್ನು ಹಗಲಲ್ಲಿ ತಡೆಹಿಡಿದಿದ್ದನು. ಇದರಿಂದ ಅರ್ಜುನನಿಗೆ ಜಯದ್ರತನನ್ನು ಕೊಲ್ಲಲು ಸಾಧ್ಯವಾಯಿತು.

ಈಗ ಅದೇ ಮಾದರಿಯಲ್ಲಿ ದೇಶದ ರಕ್ಷಣೆಗೆ ನಾವು ಸುದರ್ಶನ ಚಕ್ರವನ್ನು ನಿರ್ಮಿಸಲಿದ್ದೇವೆ. ಇದು ಪ್ರಬಲವಾದ ಶಸ್ತ್ರಾಸ್ತ್ರ ವ್ಯವಸ್ಥೆಯಾಗಿರಲಿದೆ. ಭಾರತದಲ್ಲೇ ತಯಾರಿಸಿದ ವಾಯುರಕ್ಷಣಾ ವ್ಯವಸ್ಥೆಯಾಗಿರಲಿದೆ.  ಇದು ಶತ್ರುಗಳ ದಾಳಿಯನ್ನು ತಟಸ್ಥಗೊಳಿಸುವುದಲ್ಲದೆ, ಶತ್ರುಗಳ ಮೇಲೆ ಅದಕ್ಕಿಂತ ವೇಗವಾಗಿ ಪ್ರತಿದಾಳಿ ಮಾಡಿ ಪ್ರತೀಕಾರ ತೀರಿಸಕೊಳ್ಳುವ ವ್ಯವಸ್ಥೆಯಾಗಿರಲಿದೆ ಎಂದು ಮೋದಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments