Webdunia - Bharat's app for daily news and videos

Install App

ರಾಜಕೀಯ ಶತ್ರು ದಿಗ್ವಿಜಯ್ ಸಿಂಗ್ ಮಗನ ಆರತಕ್ಷತೆ ಸಮಾರಂಭದಲ್ಲಿ ಮೋದಿ

Webdunia
ಶನಿವಾರ, 23 ಮೇ 2015 (12:07 IST)
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ಮಗ ಜೈವರ್ಧನ್ ಸಿಂಗ್ ಅವರ  ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ವಧುವರರಿಗೆ ಶುಭ ಹಾರೈಸಿ, ಆಶೀರ್ವದಿಸುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಚ್ಚರಿಯನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಅವರು ಪರಷ್ಪರ ಆರೋಪ- ಪ್ರತ್ಯಾಪಗಳ ಎರೆಚಾಟ ಕೇವಲ ರಾಜಕೀಯಕ್ಕೆ ಮಾತ್ರ ಸೀಮಿತ ಎಂಬುದನ್ನು ಸಾಬೀತುಪಡಿಸಿದ್ದಾರೆ. 
ಶುಕ್ರವಾರ ಅಶೋಕಾ ಹೊಟೆಲ್‌ನಲ್ಲಿ ಸಮಾರಂಭವನ್ನು ಆಯೋಜಿಸಲಾಗಿತ್ತು.  
 
ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್ ಮೋದಿ ಮತ್ತು ಬಿಜೆಪಿಯನ್ನು ಟೀಕಿಸುವ ಮೂಲಕವೇ ಗುರುತಿಸಿಕೊಳ್ಳುತ್ತಾರೆ.  
 
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ, ಕೇಂದ್ರ ಗೃಹ ಸಚಿವರಾದ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಹಾಜರಾಗಿ ವಧು ವರರಿಗೆ ಶುಭ ಹಾರೈಸಿದರು.
 
ಸ್ವತಃ ದಿಗ್ವಿಜಯ್‌ ಸಿಂಗ್‌ ಮತ್ತು ಮದುಮಗ ಜಯವರ್ಧನ್‌ ಅವರೇ ಮುಂದೆ ಬಂದು ಮೋದಿಯವರನ್ನು ಆದರದಿಂದ ಬರಮಾಡಿಕೊಂಡು ಅವರ  ಕೈ ಹಿಡಿದುಕೊಂಡು ಮದುವೆ ಮಂಟಪಕ್ಕೆ ಕರೆದೊಯ್ದರು.ವಧು ಮೋದಿಯವರ ಕಾಲಿಗೆರಗಲು ಬಗ್ಗಿದಾಗ ಮೋದಿ ಅವರನ್ನು ತಡೆದರು. 
 
ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ದುಮಾರಿಯಾ ರಾಜವಂಶಸ್ಥೆಯಾಗಿರುವ ಶ್ರೀಜಮ್ಯಾ ಷಾಹಿ ಜತೆ ದೆಹಲಿಯ ತಮ್ಮ ತೋಟದ ಮನೆಯಲ್ಲಿ ಮೇ 19, 2015 ರಂದು ವಿವಾಹ ಬಂಧನಕ್ಕೆ ಒಳಗಾಗಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments