Webdunia - Bharat's app for daily news and videos

Install App

ಏಷ್ಯಾ-ಆಫ್ರಿಕಾ ಅಭಿವೃದ್ಧಿ ಕಾರಿಡಾರ್ ಅನುಷ್ಠಾನದ ಅಗತ್ಯವಿದೆ: ಪ್ರಧಾನಿ ಮೋದಿ

Webdunia
ಮಂಗಳವಾರ, 23 ಮೇ 2017 (18:45 IST)
ಅಹಮದಾಬಾದ್:ಏಷ್ಯಾ ಮತ್ತು ಆಫ್ರಿಕಾ ರಾಷ್ಟ್ರಗಳ ನಡುವೆ ಸಂಬಂಧ ಬೆಸೆಯಲು ‘ಏಷ್ಯಾ-ಆಫ್ರಿಕಾ ಅಭಿವೃದ್ಧಿ ಕಾರಿಡಾರ್’ ಯೋಜನೆಯನ್ನು ಅನುಷ್ಠಾನಗೊಳಿಸಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
 
ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಆಫ್ರಿಕಾ ಅಭಿವೃದ್ಧಿ ಬ್ಯಾಂಕ್​ನ 52ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ-ಜಪಾನ್‌ ಜಂಟಿ ಸಹಭಾಗಿತ್ವದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ‘ಏಷಿಯಾ-ಆಫ್ರಿಕಾ ಅಭಿವೃದ್ಧಿ ಯೋಜನೆ’ಗೆ ಬೆಂಬಲವಿದೆ ಎಂದು ಹೇಳಿದ್ದಾರೆ. ಈ ಮೂಲಕ ‘ಒನ್ ಬೆಲ್ಟ್, ಒನ್ ರೋಡ್’ ಆರ್ಥಿಕ ಕಾರಿಡಾರ್ ರೂಪಿಸಲು ಹೊರತಿರುವ ಚೀನಾಗೆ ಸೆಡ್ಡುಹೊಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
 
ನಾನು ಜಪಾನ್​ಗೆ ತೆರಳಿದ್ದ ಸಂದರ್ಭದಲ್ಲಿ ಜಪಾನ್ ಪ್ರಧಾನಿ ಶೀಂಜೋ ಅಬೆ ಅವರೊಂದಿಗೆ ಏಷ್ಯಾ ಮತ್ತು ಆಫ್ರಿಕಾ ನಡುವೆ ಅಭಿವೃದ್ಧಿ ಕಾರಿಡಾರ್ ರೂಪಿಸುವ ಮಹತ್ವದ ಕುರಿತು ಚರ್ಚೆ ನಡೆಸಿದ್ದೆ. ಭಾರತ ಮತ್ತು ಜಪಾನ್ ಸಂಶೋಧನಾ ಸಂಸ್ಥೆಗಳು ಈಗಾಗಲೇ ಏಷ್ಯಾ-ಆಫ್ರಿಕಾ ಅಭಿವೃದ್ಧಿ ಕಾರಿಡಾರ್ ರೂಪಿಸುವ ಸಂಬಂಧ ವರದಿ ಸಿದ್ದಪಡಿಸಿದ್ದು, ಶೀಘ್ರ ಅದನ್ನು ಅನುಷ್ಠಾನಗೊಳಿಸುವ ಕಾರ್ಯ ಪ್ರಾರಂಭಿಸಲಾಗುವುದು ಎಂದಿದ್ದಾರೆ. ಅಲ್ಲದೇ ಆಫ್ರಿಕಾ ಜೊತೆಗಿನ ಭಾರತದ ಪಾಲುದಾರಿಕೆಯು ಆಫ್ರಿಕಾದ ಎಲ್ಲಾ ರಾಷ್ಟ್ರಗಳ ಬೇಡಿಕೆಗಳಿಗೆ ಸ್ಪಂದಿಸುವ ಒಂದು ಸಹಕಾರದ ಮಾದರಿಯನ್ನು ಆಧರಿಸಿದೆ ಎಂದು ಹೇಳಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments