Webdunia - Bharat's app for daily news and videos

Install App

ಪ್ರಧಾನಿ ಮೋದಿ ನನ್ನ ಹತ್ಯೆಯನ್ನು ಬಯಸಬಹುದು: ಅರವಿಂದ್ ಕೇಜ್ರೀವಾಲ್

Webdunia
ಬುಧವಾರ, 27 ಜುಲೈ 2016 (19:36 IST)
ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಕೇಂದ್ರ ಸರಕಾರ ನಿರಂತರವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
 
10 ನಿಮಿಷಗಳ ವಿಡಿಯೋದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಮೋದಿ ಆಪ್ ವಿರುದ್ಧ ದಮನ್ ಚಕ್ರ ಪ್ರಯೋಗಿಸುತ್ತಿದ್ದಾರೆ ಎಂದು ಕಿಡಿಕಾರಿದರು.
 
ನಮ್ಮ ಪಕ್ಷದ 10 ಶಾಸಕರನ್ನು ಬಂಧಿಸಲಾಗಿದೆ. ಆದಾಯ ತೆರಿಗೆ ಇಲಾಖೆ ಆಪ್ ಶಾಸಕನ ನಿವಾಸದ ಮೇಲೆ ದಾಳಿ ಮಾಡಿದೆ. 21 ಶಾಸಕರನ್ನು ಅನರ್ಹಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಮ್ಮ ಸಂಸದ ಭಗವಂತ್ ಮಾನ್‌ನನ್ನು ಅಮಾನತ್ತು ಮಾಡಲಾಗಿದೆ. ಮನೀಷ್ ಸಿಸೋಡಿಯಾ ವಿರುದ್ಧದ ತನಿಖೆ, ಸಿಬಿಐ ದಾಳಿಗಳನ್ನು ನೋಡಿದಲ್ಲಿ ಇದೊಂದು ದಮನ್ ಚಕ್ರ ಅನ್ನಿಸದೆ ಇರದು ಎಂದು ವಾಗ್ದಾಳಿ ನಡೆಸಿದ್ದಾರೆ.
 
ಮೋದಿ ಏನು ಮಾಡದಿದ್ದರೂ ಪ್ರತಿದಿನ ನಾನು ಮೋದಿ ವಿರುದ್ಧ ಆರೋಪ ಮಾಡುತ್ತಿದ್ದೇನೆ ಎಂದು ಜನತೆ ಹೇಳುತ್ತಾರೆ. ಆದರೆ, ಆದಾಯ ತೆರಿಗೆ ಇಲಾಖೆ ದಾಳಿ, ದೆಹಲಿ ಪೊಲೀಸ್ ಮತ್ತು ಸಿಬಿಐ ದಾಳಿಗಳ ಹಿಂದೆ ಒಬ್ಬ ಮಾಸ್ಟರ್‌ಮೈಂಡ್ ಖಂಡಿತವಾಗಿಯೂ ಇರುತ್ತಾರೆ. ಮೋದಿ, ಪಿಎಂಓ ಕಚೇರಿ ಮತ್ತು ಅಮಿತ್ ಶಾ ನಮ್ಮ ವಿರುದ್ಧ ಒಂದಾಗಿ ಸಂಚು ರೂಪಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments