Select Your Language

Notifications

webdunia
webdunia
webdunia
webdunia

ಪೊಲೀಸ್ ಸ್ಮಾರಕ ಲೋಕಾರ್ಪಣೆಗೊಳಿಸಿದ ವೇಳೆ ಭಾವುಕರಾದ ಪ್ರಧಾನಿ ಮೋದಿ

ಪೊಲೀಸ್ ಸ್ಮಾರಕ ಲೋಕಾರ್ಪಣೆಗೊಳಿಸಿದ ವೇಳೆ ಭಾವುಕರಾದ ಪ್ರಧಾನಿ ಮೋದಿ
ನವದೆಹಲಿ , ಭಾನುವಾರ, 21 ಅಕ್ಟೋಬರ್ 2018 (09:35 IST)
ನವದೆಹಲಿ: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಅಧಿಕಾರಿಗಳ ಸ್ಮರಣಾರ್ಥ ಚಾಣಕ್ಯಪುರಿಯಲ್ಲಿ ನಿರ್ಮಾಣಗೊಂಡ ಪೊಲೀಸ್ ಸ್ಮಾರಕವನ್ನು ಲೋಕಾರ್ಪಣೆಗೊಳಿಸಿದ ವೇಳೆ ಪ್ರಧಾನಿ ಮೋದಿ ಭಾವುಕರಾಗಿದ್ದಾರೆ.

ಲೋಕಾರ್ಪಣೆಗೊಳಿಸಿದ ಬಳಿಕ ಭಾಷಣ ಮಾಡುವಾಗ ಪ್ರಧಾನಿ ಮೋದಿ ಪೊಲೀಸ್ ಅಧಿಕಾರಿಗಳ ಸೇವೆ ನೆನೆದು ಗದ್ಗತಿತರಾದರು. ಈ ವೇಳೆ ದೇಶಕ್ಕಾಗಿ ಪ್ರಾಣ ಮುಡಿಪಿಟ್ಟ, ಜಮ್ಮು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸೈನಿಕರನ್ನು ಸದಾ ಸ್ಮರಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ಇಂದು ಮತ್ತೊಂದು ಮಹತ್ವದ ದಿನವಾಗಿದ್ದು, ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ಮಾಡುವ ಕೆಂಪುಕೋಟೆಯಲ್ಲಿ ಇಂದು ಪ್ರಧಾನಿ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಭೋಸ್ ಸ್ಥಾಪಿಸಿದ್ದ ಆಜಾದ್ ಹಿಂದ್ ಸರ್ಕಾರ್ ನ 75 ನೇ ವಾರ್ಷಿಕೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವ ಅವಸರದಲ್ಲಿ ಯುವ ಜೋಡಿಯೊಂದು ಮಾಡಿದ್ದೇನು ಗೊತ್ತಾ?