Publish Date: Fri, 08 May 2020 (10:13 IST)
Updated Date: Fri, 08 May 2020 (10:15 IST)
ಮುಂಬೈ: ಮಹಾರಾಷ್ಟ್ರದ ಔರಂಗದಾಬಾದ್ ಬಳಿ ಇಂದು ನಸುಕಿನಲ್ಲಿ ನಡೆದ ಗೂಡ್ಸ್ ರೈಲು ದುರಂತದಲ್ಲಿ ಸಾವನ್ನಪ್ಪಿದ ಘಟನೆ ಬಗ್ಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ರೈಲ್ವೇ ಸಚಿವ ಪಿಯೂಷ್ ಗೋಯಲ್ ಜತೆ ಮಾತನಾಡಿರುವುದಾಗಿ ಹೇಳಿದ್ದಾರೆ. ಸಚಿವರೂ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಪ್ರಧಾನಿ ಮೋದಿ ಪರಿಸ್ಥಿತಿ ಬಗ್ಗೆ ತಿಳಿದುಕೊಂಡಿದ್ದು, ಕೇಂದ್ರದಿಂದ ಅಗತ್ಯವಿರುವ ಎಲ್ಲಾ
ನೆರವು ನೀಡುವುದಾಗಿ ಹೇಳಿದ್ದಾರೆ.