Webdunia - Bharat's app for daily news and videos

Install App

ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Krishnaveni K
ಮಂಗಳವಾರ, 14 ಮೇ 2024 (12:13 IST)
Photo Courtesy: Twitter
ವಾರಣಾಸಿ: ಲೋಕಸಭೆ ಚುನಾವಣೆ 2024 ರಲ್ಲಿ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪ್ರಧಾನಿ ಮೋದಿ ಇಂದು 11.45 ರ ಅಭಿಜಿನ್ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಿದರು.

ಸರಿಯಾದ ಸಮಯಕ್ಕೆ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿ ಶುಭ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ದಶಾಶ್ವಮೇಧ ಘಾಟ್ ನಲ್ಲಿ ಪುಣ್ಯ ಸ್ನಾನ ಮಾಡಿ ಗಂಗಾರತಿ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ಗಂಗೆ ನನ್ನನ್ನು ದತ್ತು ಪಡೆದಿದ್ದಾಳೆ ಎಂದು ಭಾವುಕರಾಗಿ ಹೇಳಿದ್ದಾರೆ.

ವೇದಮಂತ್ರಗಳ ಘೋಷದ ನಡುವೆ ಮೋದಿ ಗಂಗೆಗೆ ಪೂಜೆ ಸಲ್ಲಿಸಿದರು. ಕಳೆದ ಬಾರಿಯೂ ನಾಮಪತ್ರ ಸಲ್ಲಿಕೆಗೆ ಮೊದಲು ಮೋದಿ ಗಂಗೆಗೆ ಪೂಜೆ ಸಲ್ಲಿಸಿದ್ದರು. ನಿನ್ನೆಯಿಂದ ಪ್ರಧಾನಿ ಮೋದಿ ತಮ್ಮ ಸ್ವಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ. ಇಲ್ಲಿ ಸುಮಾರು 5 ಕಿ.ಮೀ.ಗಳ ಬೃಹತ್ ರೋಡ್ ಶೋ ನಡೆಸಿದ್ದರು.

ಈ ವೇಳೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಿದ್ದಾರೆ. ಇದು ಮೂರನೇ ಬಾರಿಗೆ ಮೋದಿ ವಾರಣಾಸಿಯಿಂದ ಸ್ಪರ್ಧೆ ನಡೆಸುತ್ತಿದ್ದಾರೆ. ಕಳೆದ ಎರಡೂ ಬಾರಿಯೂ ಮೋದಿಗೆ ಇಲ್ಲಿ ಭಾರೀ ಅಂತರದ ಗೆಲುವು ಸಿಕ್ಕಿದೆ. ಈಗ ಮತ್ತೊಮ್ಮೆ ಆಯ್ಕೆಯಾಗುವ ವಿಶ್ವಾಸದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments