Webdunia - Bharat's app for daily news and videos

Install App

ಅಯೋಧ್ಯೆಗೆ ಬಂದ ಪ್ರಧಾನಿ ಮೋದಿಗೆ ಹೂ ಮಳೆ ಸ್ವಾಗತ ಕೋರಿದ ಜನ

Webdunia
ಶನಿವಾರ, 30 ಡಿಸೆಂಬರ್ 2023 (11:52 IST)
Photo Courtesy: Twitter
ಅಯೋಧ್ಯೆ: ಪ್ರಧಾನಿ ಮೋದಿ ಇಂದು ಸಾವಿರಾರು ಕೋಟಿ ರೂ.ಗಳ ಯೋಜನೆ ಉದ್ಘಾಟಿಸಲು ದೇವಾಲಯ ನಗರಿ ಅಯೋಧ್ಯೆಗೆ ಬಂದಿಳಿದಿದ್ದಾರೆ.

ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖುದ್ದಾಗಿ ಬರಮಾಡಿಕೊಂಡಿದ್ದಾರೆ. ಇಂದು ಅಯೋಧ್ಯೆಯಲ್ಲಿ 15,700 ಕೋಟಿ ರೂ. ಗಳ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬೆನ್ನಲ್ಲೇ ಸಾರಿಗೆ ವ್ಯವಸ್ಥೆ ಸುಧಾರಣೆಗೆ ರೈಲ್ವೇ ನಿಲ್ದಾಣ ಮತ್ತು ವಿಮಾನ ನಿಲ್ದಾಣ ಇಂದು ಲೋಕಾರ್ಪಣೆಯಾಗುತ್ತಿದೆ. ಅಯೋಧ್ಯೆಗೆ ಬಂದ ಪ್ರಧಾನಿ ಮೋದಿ ರೋಡ್ ಶೋ ವೇಳೆ ಜನ ಹೂ ಮಳೆ ಸುರಿಸಿ ಸ್ವಾಗತ ನೀಡಿದ್ದಾರೆ.

ಇಂದು ಮಧ‍್ಯಾಹ್ನ ಮೋದಿ ಜನರನ್ನುದ್ದೇಶಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಅಲ್ಲದೆ, ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯಗಳ ಪರಿಶೀಲನೆಯನ್ನೂ ನಡೆಸಲಿದ್ದಾರೆ. ಜನವರಿ 22 ಕ್ಕೆ ರಾಮಮಂದಿರ ಲೋಕಾರ್ಪಣೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments