Select Your Language

Notifications

webdunia
webdunia
webdunia
webdunia

ಕನ್ನಡ ರಾಜ್ಯೋತ್ಸವ: ಕರ್ನಾಟಕ ಜನತೆಗೆ ಮೋದಿ ಶುಭಾಶಯ

ಕನ್ನಡ ರಾಜ್ಯೋತ್ಸವ: ಕರ್ನಾಟಕ ಜನತೆಗೆ ಮೋದಿ ಶುಭಾಶಯ
ನವದೆಹಲಿ , ಶನಿವಾರ, 1 ನವೆಂಬರ್ 2014 (13:07 IST)
ಅಖಂಡ ಕರ್ನಾಟಕ ರಾಜ್ಯ ರಚನೆಯಾದ ಈ ಶುಭದಿನದಂದು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ರಾಜ್ಯದ ನಿವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. 

ಕನ್ನಡ ರಾಜ್ಯೋತ್ಸವದ ಈ ಶುಭಗಳಿಗೆಯಲ್ಲಿ  ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಮುಂಬರುವ ವರ್ಷಗಳಲ್ಲಿ ಕರ್ನಾಟಕ ಪ್ರಗತಿಯ ಹೊಸ ಎತ್ತರಕ್ಕೆ ಏರಲಿ ' ಎಂದು ಮೋದಿ ಆಶಿಸಿದ್ದಾರೆ.
 
ಪ್ರತಿವರ್ಷ  ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. 1956 ರ ಈ ದಿನ, ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳು ಕರ್ನಾಟಕ ರಾಜ್ಯದಲ್ಲಿ ವಿಲೀನಗೊಂಡವು. 
 
 ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಈ ದಿನವನ್ನು ರಾಜ್ಯಾದ್ಯಂತ ಹಬ್ಬವಾಗಿ ಆಚರಿಸಲಾಗುತ್ತದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪುಷ್ಟೀಕರಣಕ್ಕೆ ಕೊಡುಗೆ ನೀಡಿದಂತ ಸಾಧಕರಿಗೆ ಪ್ರಶಸ್ತಿ, ಸನ್ಮಾನ ಮಾಡುವ ಮೂಲಕ  ಮುಖ್ಯಮಂತ್ರಿಗಳಿಂದು ಗೌರವ ಸಮರ್ಪಣೆ ಮಾಡುತ್ತಾರೆ. 

Share this Story:

Follow Webdunia kannada