ಸರ್ದಾರ್ ಸರೋವರ್ ಡ್ಯಾಂ ಲೋಕಾರ್ಪಣೆ ಮಾಡಿದ ಪಿಎಂ ಮೋದಿ

Webdunia
ಭಾನುವಾರ, 17 ಸೆಪ್ಟಂಬರ್ 2017 (11:21 IST)
ಜಿಲ್ಲೆಯ ಕೆವಡಿಯಾ ಬಳಿ ನಿರ್ಮಿಸಲಾದ ವಿಶ್ವದ ಎರಡನೇ ಅತಿ ದೊಡ್ಡ ಸರ್ದಾರ್ ಸರೋವರ್ ಡ್ಯಾಂ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
ನರ್ಮದಾ ನದಿಗೆ ಅಡ್ಡಲಾಗಿ ಕಟ್ಟಿರುವ ಸರ್ದಾರ್ ಸರೋವರ್ ಆಣೆಕಟ್ಟಿನಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಲಿದೆ. 65 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. 4 ಕೋಟಿ ಜನರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ್ದಾರೆ.
 
ಆಣೆಕಟ್ಟು ನಿರ್ಮಾಣದಿಂದ ಕೃಷಿಗೆ ಹೆಚ್ಚಿನ ಆದ್ಯತೆ ದೊರೆತಂತಾಗಿದ್ದು, ರೈತರಿಗೆ ಹೆಚ್ಚಿನ ಲಾಭವಾಗಲಿದೆ. ನೀರಾವರಿ ಕೃಷಿ ಅವಲಂಬಿಸಿರುವ ರೈತರು ಇನ್ಮುಂದೆ ಆತಂಕಪಡುವ ಅಗತ್ಯವಿಲ್ಲ ಎಂದರು.  
 
ಕೇಂದ್ರ ಸರಕಾರ ರೈತರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ರೈತರಿಗೆ ಸರಕಾರದಿಂದ ಮತ್ತಷ್ಟು ಸೌಲಭ್ಯಗಳು ದೊರೆಯಲಿವೆ. ರೈತರು ಸರಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. 
 
1961 ಏಪ್ರಿಲ್ 5 ರಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಶಿಲಾನ್ಯಾಸ ನೆರವೇರಿಸಿದ್ದರು. ಶಂಕುಸ್ಥಾಪನೆ ನೆರವೇರಿಸಿ 56 ವರ್ಷಗಳ ನಂತರ ಆಣೆಕಟ್ಟು ಉದ್ಘಾಟನೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments