Webdunia - Bharat's app for daily news and videos

Install App

ದೇಶದ ಅತಿ ಉದ್ದದ ಧೋಲಾ-ಸಾದಿಯಾ ಸೇತುವೆ ಲೋಕಾರ್ಪಣೆ

Webdunia
ಶುಕ್ರವಾರ, 26 ಮೇ 2017 (11:39 IST)
ಅಸ್ಸಾಂ:ದೇಶದ ಅತಿ ಉದ್ದದ ಸೇತುವೆಯಾದ ಬ್ರಹ್ಮಪುತ್ರ ನದಿಗೆ ಕಟ್ಟಿದ ಧೋಲಾ-ಸಾದಿಯಾ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
 
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಎನ್ ಡಿಎ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನಲೆಯಲ್ಲಿ ಧೋಲಾ-ಸಾದಿಯಾ ಸೇತುವೆಯನ್ನು ಲೋಕಾರ್ಪಣೆ ಮಾಡುವ ಮೂಲಕ ಸರ್ಕಾರದ ಮೂರು ವರ್ಷದ ಸಂಭ್ರಮಾಚರಣೆಗೂ ಚಾಲನೆ ದೊರೆತಿದೆ.
 
ಸರ್ಕಾರಕ್ಕೆ 3 ವರ್ಷ ತುಂಬಿದ ಹಿನ್ನಲೆಯಲ್ಲಿ ದೇಶಾದ್ಯಂತ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅಸ್ಸಾಂನ ಪುರಾನಾ ಸಾದಿಯಾಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು  ಸೇತುವೆ ಉದ್ಘಾಟನೆ ಮಾಡಿದರು. ಅಸ್ಸಾಂನ ಬ್ರಹ್ಮಪುತ್ರಾ ನದಿಯ ಮೇಲೆ ನಿರ್ಮಾಣಗೊಂಡಿರುವ ದೇಶದ ಅತಿ ಉದ್ದದ ಸೇತುವೆ ಇದಾಗಿದ್ದು, ಅಸ್ಸಾಂನ ಧೋಲಾ ಮತ್ತು ಸದಿಯಾ ನಡುವೆ ಈ  ಸೇತುವೆ ಸಂಪರ್ಕ ಕಲ್ಪಿಸುತ್ತದೆ. ಜೊತೆಗೆ ಗಡಿರಾಜ್ಯ ಅರುಣಾಚಲ ಮತ್ತು ಅಸ್ಸಾಂ ನಡುವೆ ಸಂಪರ್ಕ ಕಲ್ಪಿಸುತ್ತದೆ. ಈ ಎರಡೂ ರಾಜ್ಯಗಳು ಚೀನಾ ಗಡಿಗೆ ಹೊಂದಿಕೊಂಡಂತೆ ಇರುವುದರಿಂದ ವ್ಯೂಹಾತ್ಮಕವಾಗಿ ಇದು ಅತ್ಯಂತ  ಮಹತ್ವದ್ದಾಗಿದೆ ಎನ್ನಲಾಗಿದೆ.
 
ಸುಮಾರು 9.15 ಕಿ.ಮೀ. ಉದ್ದವಿರುವ ಈ ಸೇತುವೆ ಬಾಂದ್ರಾ-ವರ್ಲಿ ಸಮುದ್ರ ಸಂಪರ್ಕ ಸೇತುವೆ (5.6 ಕಿ.ಮೀ.)ಗಿಂತ ಶೇ.30ರಷ್ಟು ಉದ್ದವಾಗಿದೆ. ಬ್ರಹ್ಮಪುತ್ರಾ ನದಿಯ ಮೇಲೆ ನಿರ್ಮಾಣಗೊಂಡಿರುವ ನಾಲ್ಕನೇ ಸೇತುವೆ  ಇದಾಗಿದ್ದು, ಸೇನಾ ಸಿಬ್ಬಂದಿಗೆ ಅಸ್ಸಾಂನಿಂದ ಅರುಣಾಚಲ ಪ್ರದೇಶ-ಚೀನಾ ಗಡಿ ಪ್ರದೇಶದಲ್ಲಿರುವ ಪೋಸ್ಟ್‌ಗಳಿಗೆ ತೆರಳಲು ನೆರವಾಗಲಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments