Webdunia - Bharat's app for daily news and videos

Install App

‘ರಾಹುಲ್ ಗಾಂಧಿಗೆ ನಮ್ಮ ಯೋಧರಿಗಿಂತ ಚೀನಾ ಮೇಲೆಯೇ ಹೆಚ್ಚು ವಿಶ್ವಾಸ’

Webdunia
ಶುಕ್ರವಾರ, 3 ನವೆಂಬರ್ 2017 (08:51 IST)
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ನಮ್ಮ ಯೋಧರ ಮೇಲೆ ವಿಶ್ವಾಸವಿಲ್ಲ. ಅದಕ್ಕೇ ಡೋಕ್ಲಾಂ ಬಿಕ್ಕಟ್ಟು ಎದುರಾದಾಗ ಚೀನಾ ರಾಯಭಾರಿಗಳೊಂದಿಗೆ ಮಾತುಕತೆ ನಡೆಸಿದರು ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

 
ಹಿಮಾಚಲ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣ ಹಾಗೂ ಜಾತಿವಾದ ರಾಜಕಾರಣದಲ್ಲಿ ಮುಳುಗಿರುವ ಕಾಂಗ್ರೆಸ್ ನಿಂದ ಹಿಮಾಚಲ ಪ್ರದೇಶವನ್ನು ರಕ್ಷಿಸಬೇಕಿದೆ ಎಂದು ಅವರು ಈ ಸಂದರ್ಭದಲ್ಲಿ ಕರೆ ಕೊಟ್ಟಿದ್ದಾರೆ.

‘ಡೋಕ್ಲಾಂ ವಿವಾದದ ಸಂದರ್ಭದಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಂಡಿತು ಎಂದು ಇಡೀ ರಾಷ್ಟ್ರವೇ ನೋಡಿದೆ. ನಮ್ಮ ದೇಶವನ್ನು ದಶಕಗಳ ಕಾಲ ಆಳಿದ ವಂಶದ ಕುಡಿಗೆ ನಮ್ಮ ಸೈನಿಕರ ಮೇಲೆಯೇ ನಂಬಿಕೆಯಿಲ್ಲ. ಅದರ ಬದಲು ಚೀನಾ ರಾಯಭಾರಿಯನ್ನು ಭೇಟಿಯಾಗಿ ಡೋಕ್ಲಾಂ ವಿವಾದದ ಸ್ಥಿತಿಗತಿ ತಿಳಿದುಕೊಂಡರು’ ಎಂದು ರಾಹುಲ್ ಹೆಸರು ಹೇಳದೆಯೇ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments