Select Your Language

Notifications

webdunia
webdunia
webdunia
webdunia

ಸಿಎಂಗಳ ಜೊತೆ ಇಂದು ಮೋದಿ ಮಹತ್ವದ ಮೀಟಿಂಗ್: ಮಹತ್ವದ ಘೋಷಣೆ ಕಾದಿದೆಯಾ

PM Modi
ನವದೆಹಲಿ: ಎಲ್ಲಾ ರಾಜ್ಯಗಳ ಸಿಎಂ ಜೊತೆ ಇಂದು ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆ ಬಳಿಕ ಮಹತ್ವದ ಘೋಷಣೆ ಹೊರಬೀಳಬಹುದೇ ಎಂಬ ಕುತೂಹಲ ಜನರಲ್ಲಿದೆ.

ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿದೆ. ಇದರಿಂದ ಭಾರತ ಸೇರಿದಂತೆ ಜಗತ್ತಿನಾದ್ಯಂತ ತೈಲ, ಅನಿಲ ಮತ್ತು ಕಚ್ಚಾ ವಸ್ತುಗಳ ಕೊರತೆ ಎದುರಾಗಿದೆ. ಭಾರತದಲ್ಲೂ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಆಹಾರ ಉದ್ಯಮಗಳು ಸಂಕಷ್ಟದಲ್ಲಿವೆ.

ಇಂದು ಸಂಜೆ 6.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ದೇಶದಲ್ಲಿ ಸಿಲಿಂಡರ್ ಅಭಾವ ಉಂಟಾಗಿರುವುದರಿಂದ ಅದನ್ನು ನಿಭಾಯಿಸುವ ಕುರಿತು ಸಭೆ ನಡೆಯಲಿದೆ. ತೈಲ, ಅನಿಲ ಪೂರೈಕೆಯಲ್ಲಿ ರಾಜ್ಯ ಮತ್ತು ಕೇಂದ್ರದ ನಡುವೆ ಸಮನ್ವಯತೆ ಸಾಧಿಸಲು ಈ ಸಭೆ ನಡೆಯುತ್ತಿದೆ.

ಈಗಾಗಲೇ ಕೊವಿಡ್ ಪರಿಸ್ಥಿತಿಯಲ್ಲಿ ಎದುರಿಸಲು ಸಿದ್ಧರಾಗಿ ಎಂದು ದೇಶದ ಜನರಿಗೆ ಪ್ರಧಾನಿ ಮೋದಿ ಕರೆ ಕೊಟ್ಟಿದ್ದರು. ಇದೀಗ ಕೊವಿಡ್ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರಗಳು ಸಮನ್ವಯತೆಯಿಂದ ಪರಿಸ್ಥಿತಿ ನಿಭಾಯಿಸಿದಂತೆ ಈಗಲೂ ಪರಿಸ್ಥಿತಿ ನಿಭಾಯಿಸಲು ಪ್ರಧಾನಿ ಮೋದಿ ಸಲಹೆಗಳನ್ನು ನೀಡಲಿದ್ದಾರೆ. ಈ ಸಭೆ ಬಳಿಕ ಮಹತ್ವದ ಘೋಷಣೆಯೇನಾದರೂ ಹೊರಬಹುದೇ ಎಂದು ಕಾದು ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇರಾನ್ ಜೊತೆಗೆ ಯುದ್ಧಕ್ಕೆ 10 ದಿನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್