Select Your Language

Notifications

webdunia
webdunia
webdunia
webdunia

ಪ್ರಧಾನಿ ನರೇಂದ್ರ ಮೋದಿ ನಂಬಿಕೆಗೆ ಅರ್ಹರಲ್ಲ: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ನಂಬಿಕೆಗೆ ಅರ್ಹರಲ್ಲ: ಕಾಂಗ್ರೆಸ್
ನವದೆಹಲಿ , ಶನಿವಾರ, 26 ನವೆಂಬರ್ 2016 (14:45 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ತಾವೇ ನೀಡಿದ ಆಶ್ವಾಸನೆಗಳನ್ನು ಈಡೇರಿಸಿಲ್ಲವಾದ್ದರಿಂದ ಅವರ ನಂಬುವಂತಹ ವ್ಯಕ್ತಿಯಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ವಕ್ತಾರ ಕಪಿಲ್ ಸಿಬಲ್, ಪ್ರಧಾನಿ ಮೋದಿ ನೋಟು ನಿಷೇಧ ಬಿಕ್ಕಟ್ಟು 50 ದಿನಗಳೊಳಗಾಗಿ ಬಗೆಹರಿಯಲಿದೆ ಎಂದು ಹೇಳಿದ್ದಾರೆ. ಆದರೆ, ಆರ್‌ಬಿಐ ಕನಿಷ್ಠ ಆರು ತಿಂಗಳಾದರೂ ಬೇಕು ಎಂದು ಪ್ರತಿಪಾದಿಸುತ್ತಿದೆ ಎಂದು ಲೇವಡಿ ಮಾಡಿದರು.   
 
ಲೋಕಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೂ ಪ್ರಧಾನಮಂತ್ರಿ ಮೋದಿ ಲೋಕಸಭೆಯನ್ನು ಎದುರಿಸಲು ಸಿದ್ದರಿಲ್ಲ. ಬಿಜೆಪಿ ಮುಖಂಡರೇ ಮೋದಿಯ ವಿರುದ್ಧವಾಗಿದ್ದಾರೆ. ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಉತ್ತರಿಸಿದಂತಹ ಪ್ರಶ್ನೆಗಳನ್ನು ಕೇಳಲು ವಿಪಕ್ಷಗಳು ಸಿದ್ದವಾಗಿವೆ ಎಂದು ವಾಗ್ದಾಳಿ ನಡೆಸಿದರು.
 
ಪ್ರಧಾನಿ ಮೋದಿ ವಿದೇಶಿ ಬ್ಯಾಂಕ್‌ಗಳಲ್ಲಿರುವ 80 ಲಕ್ಷ ಕೋಟಿ ಹಣವನ್ನು ಮರಳಿ ತರುವುದಾಗಿ ಹೇಳಿದ್ದರು. ಕಪ್ಪು ಹಣ ಮರಳಿ ತಂದಿದ್ದಾರೆಯೇ? ಲೋಕಪಾಲ್ ಜಾರಿಗೊಳಿಸುವುದಾಗಿ ಹೇಳಿದ್ದರು ಜಾರಿಗೆ ತಂದರೆ? ಎಂದು ಪ್ರಶ್ನಿಸಿದರು.
 
ಯಾವ ಭರವಸೆಗಳನ್ನು ಈಡೇರಿಸಿದ್ದಾರೆ? ದೇಶದ ಜನತೆ ಯಾಕೆ ಅವರನ್ನು ನಂಬಬೇಕು? ಪ್ರಧಾನಿ ಮೋದಿ ಮೇಲೆ ನಂಬಿಕೆಯಿಲ್ಲ. ಅವರು ನಂಬಿಕೆಗೆ ಅರ್ಹರಲ್ಲ ಎಂದು ಕಿಡಿಕಾರಿದ್ದಾರೆ.
 
ನೋಟು ನಿಷೇಧ ಬಿಕ್ಕಟ್ಟು ಎರಡು ದಿನಗಳಲ್ಲಿ ಸಾಮಾನ್ಯವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅದು ಸಾಧ್ಯವಾಗಲಿಲ್ಲ. ನಂತರ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಎರಡು ವಾರಗಳಲ್ಲಿ ಪರಿಸ್ಥಿತಿ ತಹಬದಿಗೆ ಬರಲಿದೆ ಎಂದಿದ್ದರು. ಅದು ಕೂಡಾ ಆಗಲಿಲ್ಲ. ಹಾಗಾದ್ರೆ ನಾವು ಯಾಕೆ ಪ್ರಧಾನಿ ಮೋದಿಯವರನ್ನು ನಂಬಬೇಕು ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಯ ಆಕ್ಷೇಪಾರ್ಹ ಚಿತ್ರಗಳು ಪೋಸ್ಟ್: ಆರೋಪಿ ಅರೆಸ್ಟ್