Webdunia - Bharat's app for daily news and videos

Install App

ಪ್ರಧಾನ ಮಂತ್ರಿಯ ಸ್ಥಾನದ ಗರಿಮೆ ಕಳಾಹೀನಗೊಳ್ಳುತ್ತಿದೆ: ಶರದ್ ಪವಾರ್

Webdunia
ಸೋಮವಾರ, 30 ಅಕ್ಟೋಬರ್ 2023 (13:51 IST)
ಆರ್‌ಎಸ್ಎಸ್ ಸಿದ್ಧಾಂತವನ್ನು ಪ್ರಸಾರ ಮಾಡಲು ದೂರದರ್ಶನವನ್ನು ಬಳಸಿಕೊಂಡಿದ್ದಕ್ಕೆ ಕೇಂದ್ರ ಸರಕಾರದ ಮೇಲೆ ಕಟು ವಾಗ್ದಾಳಿ ನಡೆಸಿದ ಪವಾರ್, ಒಬ್ಬರ ಸಿದ್ಧಾಂತವನ್ನು ಜನರ ಮೇಲೆ ಬಲವಂತವಾಗಿ ಹೇರುವುದು ಆತಂಕವನ್ನು ಉಂಟು ಮಾಡುವಂತಹ ವಿಚಾರ.  ಪ್ರಧಾನಿ ಪದವಿಯ ಪ್ರತಿಷ್ಠೆಯನ್ನು ತಗ್ಗಿಸುತ್ತಿದ್ದಾರೆ ಎಂದು ಶರದ್ ಪವಾರ್  ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
 ಇಂತಹ ಸಂದರ್ಭಗಳಲ್ಲಿ ಸಾಮಾಜಿಕ ಸಮಾನತೆ ಅಪಾಯದಡಿ ಸಿಲುಕಿಕೊಳ್ಳುತ್ತದೆ. ಬಿಜೆಪಿ ವಿರೋಧಿ ರಂಗ ಅಸ್ತಿತ್ವಕ್ಕೆ ಬಂದರೆ ನಾನದಕ್ಕೆ ಬೆಂಬಲ ನೀಡುತ್ತೇನೆ. ಆದರೆ, ನಾನಾಗಿಯೇ ಈ ಕಾರ್ಯದ  ಎಂದು ಹೇಳಿದ್ದಾರೆ. 
 
ತಮ್ಮ ಪ್ರಾಬಲ್ಯವಿರುವ ಬಾರಾಮತಿ ಕ್ಷೇತ್ರದಲ್ಲಿನ ಜನರನ್ನು ಶರದ್ ಪವಾರ್  "ಗುಲಾಮ" ರಂತೆ ನಡೆಸಿಕೊಳ್ಳುತ್ತಾರೆ  ಎಂದು ಪ್ರಧಾನಿ ನರೇಂದ್ರ ಮೋದಿ  ಆರೋಪ ಮಾಡಿದ್ದಕ್ಕೆ ಪ್ರತಿ ದಾಳಿ ನಡೆಸಿರುವ ಎನ್‌ಸಿಪಿ ಮುಖ್ಯಸ್ಥ  ಮೋದಿ ವೈಯಕ್ತಿಕ ದಾಳಿ ನಡೆಸುವುದರ ಚರ್ಚೆಯ ಮೌಲ್ಯವನ್ನು ಕಡಿಮೆ ಮಾಡುತ್ತಿದ್ದಾರೆ ಅಲ್ಲದೇ ಪ್ರಧಾನಿ ಪದವಿಯ ಪ್ರತಿಷ್ಠೆಯನ್ನು ತಗ್ಗಿಸುತ್ತಿದ್ದಾರೆ ಎಂದು ಕಿಚಾಯಿಸಿದ್ದಾರೆ. 
 
 
ಮುಂಬೈನಲ್ಲಿ ಮಾತನಾಡುತ್ತಿದ್ದ ಪವಾರ್ " ಮೋದಿಯವರು ವೈಯಕ್ತಿಕ ದಾಳಿಯ ಭಾಷಣಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಈ ರೀತಿಯ ಮಾತುಗಳಿಂದ ಪ್ರಧಾನ ಮಂತ್ರಿಯ ಸ್ಥಾನದ ಗರಿಮೆ ಕಳಾಹೀನಗೊಳ್ಳುತ್ತಿದೆ ಮತ್ತು ಸಾರ್ವಜನಿಕ ಚರ್ಚೆಯ ಮೌಲ್ಯ ಕುಂಠಿತವಾಗುತ್ತಿದೆ  " ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

ಮುಂದಿನ ಸುದ್ದಿ
Show comments