Webdunia - Bharat's app for daily news and videos

Install App

2018ರ ವೇಳೆಗೆ ಪ್ರತಿ ಮನೆಯೂ ಪ್ರಜ್ವಲಿಸಲಿದೆ: ಪ್ರಧಾನಿ ಮೋದಿ

Webdunia
ಮಂಗಳವಾರ, 26 ಸೆಪ್ಟಂಬರ್ 2017 (08:18 IST)
ನವದೆಹಲಿ: ದೇಶದ ಪ್ರತಿ ಮನೆಗೂ ವಿದ್ಯುತ್ ಭಾಗ್ಯ ಕಲ್ಪಿಸುವ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ಸೌಭಾಗ್ಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ದೀನ ದಯಾಳ್ ಉರ್ಜ ಭವನದಲ್ಲಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಯೋಜನೆಗೆ 16 ಸಾವಿರ ಕೋಟಿ ವೆಚ್ಚವಾಗಲಿದೆ. 18 ಸಾವಿರ ಹಳ್ಳಿಗಳಿಗೆ ಒಂದು ಸಾವಿರ ದಿನದಲ್ಲಿ ವಿದ್ಯುತ್ ನೀಡಲು ಸರ್ಕಾರ ಗುರಿಹೊಂದಿದೆ. ಈ ಪೈಕಿ 3 ಸಾವಿರ ಹಳ್ಳಿಗಳು ಮಾತ್ರ ಬಾಕಿ ಉಳಿದಿದ್ದು, ಶೀಘ್ರದಲ್ಲೇ ಆ ಹಳ್ಳಿಗಳನ್ನೂ ವಿದ್ಯುನ್ಮಾನಗೊಳಿಸಲಾಗುವುದು. ಸೌಭಾಗ್ಯ ಯೋಜನೆಯು ಸರ್ಕಾರದ ಮೂರು ವರ್ಷದ ಸಂಕೇತವಾಗಿದೆ ಎಂದರು.

ಉಜಾಲಾ ಯೋಜನೆಯಡಿ 26 ಕೋಟಿಗೂ ಹೆಚ್ಚು ಎಲ್ಇಡಿ ಬಲ್ಬ್ ಗಳನ್ನು ವಿತರಿಸಲಾಗಿದ್ದು, ಪ್ರತಿ ವರ್ಷ 13,700 ಕೋಟಿ ರೂ. ಉಳಿತಾಯವಾಗುತ್ತಿದೆ. ಕಳೆದ ವರ್ಷ ನಾಸಾ ತೆಗೆದ ಫೋಟೊದಲ್ಲಿ ಭಾರತ ವಿದ್ಯುತ್ ದೀಪಗಳಿಂದ ಪ್ರಜ್ವಲಿಸುತ್ತಿತ್ತು. 2012ರಲ್ಲೂ ಇದೇ ಫೋಟೊ ತೆಗೆದಿತ್ತು ಆದರೆ ಸಂಪೂರ್ಣ ಕತ್ತಲು ಆವರಿಸಿತ್ತು ಎಂದರು.

ಈಯೋಜನೆಯಡಿ ಬಡವರು ಸೀಮೆಎಣ್ಣೆ ಬದಲು ಗ್ಯಾಸ್ ಪಡೆಯಲಿದ್ದಾರೆ. ಪ್ರತಿ ಮನೆಗೆ 5 ಎಲ್ಇಡಿ ಬಲ್ಬ್ ಹಾಗೂ ಫ್ಯಾನ್ ಸಿಗಲಿದೆ. ಇದಲ್ಲದೆ ಆರೋಗ್ಯ ಸೇವೆ, ಶಿಕ್ಷಣ, ಸಾರ್ವಜನಿಕ ರಕ್ಷಣೆ ಮತ್ತು ಸಂವಹನ ಕ್ಷೇತ್ರದ ಅಭಿವೃದ್ಧಿಗೆ ಈ ಯೋಜನೆ ಸಹಾಯವಾಗಲಿದೆ ಎಂದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments