Webdunia - Bharat's app for daily news and videos

Install App

ಶ್ರೀನಗರದ ಬೀದಿ ಗುಡಿಸಿದ ಸಿಎಂ ಒಮರ್ ಅಬ್ದುಲ್ಲಾ: ಮೋದಿ ಶ್ಲಾಘನೆ

Webdunia
ಶುಕ್ರವಾರ, 24 ಅಕ್ಟೋಬರ್ 2014 (15:12 IST)
ಪೊರಕೆ ಹಿಡಿದುಕೊಂಡು ಶ್ರೀನಗರದ ಬೀದಿಗಳಲ್ಲಿ ಕಸ ಗುಡಿಸಿದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾರವರನ್ನು ಮನಸಾರೆ ಕೊಂಡಾಡಿರುವ ಪ್ರಧಾನಿ ನರೇಂದ್ರ ಮೋದಿ,ಇದೊಂದು "ಅದ್ಭುತ ಪ್ರಯತ್ನ"ವಾಗಿದ್ದು  ಸ್ವಚ್ಛ ಭಾರತ ಅಭಿಯಾನಕ್ಕೆ ಇದು ಪುಷ್ಠಿ ನೀಡಲಿದೆ ಎಂದು ಹೇಳಿದ್ದಾರೆ.


 
"ಒಮರ್ ಅಬ್ದುಲ್ಲಾರವರದು ಅತ್ಯುತ್ತಮ ಪ್ರಯತ್ನ ! ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಅವರಿಟ್ಟ ಈ ನಡೆ ಜಮ್ಮು ಕಾಶ್ಮೀರದ ಜನರಿಗೆ ಪ್ರೇರಕವಾಗಲಿದೆ ಮತ್ತು ಅಭಿಯಾನವನ್ನು ಬಲಗೊಳಿಸಲಿದೆ ಎಂದು ಪ್ರಧಾನಿ ಟ್ವಿಟ್ ಮಾಡಿದ್ದಾರೆ.
 
'ಸ್ವಚ್ಛ ಭಾರತ್ ಅಭಿಯಾನ'ದ ಭಾಗವಾಗಿ ಬುಧವಾರ ರಾತ್ರಿ ನಗರದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡ ಶ್ರೀನಗರ ಮುನ್ಸಿಪಲ್ ಕಾರ್ಪೋರೇಶನ್ ಅಧಿಕಾರಿಗಳನ್ನು ಕೂಡಿಕೊಂಡ ಸಿಎಂ ಒಮರ್ ಅಬ್ದುಲ್ಲಾ  ಪ್ರವಾಹದಿಂದ ಅತಿಯಾಗಿ ಸಮಸ್ಯೆಗೀಡಾಗಿರುವ ವೇರ್ ನಾಗರ್ ಪ್ರಾಂತ್ಯದ ರಸ್ತೆಗಳನ್ನು ಗುಡಿಸಿ ಸ್ವಚ್ಛಗೊಳಿಸಿದರು. ಆ ಸಂದರ್ಭದಲ್ಲಿ ಎಎಮ್‌ಸಿ ಕಮಿಷನರ್ ಜಿ ಎನ್ ಕಸ್ಬಾ ಕೂಡ ಅವರಿಗೆ ಸಾಥ್ ನೀಡಿದ್ದರು. 
 
ಈ ತಿಂಗಳ ಪ್ರಾರಂಭದಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದ್ದ ಸ್ವಚ್ಛ ಭಾರತ ಅಭಿಯಾನಕ್ಕೆ ತಮ್ಮನ್ನು ನಾಮನಿರ್ದೇಶನ ಮಾಡಿದ್ದಕ್ಕೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಒಮರ್ ಈ ಮೊದಲು ಧನ್ಯವಾದಗಳನ್ನು ಸಲ್ಲಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments