Webdunia - Bharat's app for daily news and videos

Install App

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಪರಸ್ಪರ ಜಗಳ್ ಬಂದಿ

Webdunia
ಮಂಗಳವಾರ, 4 ಡಿಸೆಂಬರ್ 2018 (08:57 IST)
ನವದೆಹಲಿ: ರಾಜಸ್ಥಾನ ಮತ್ತು ತೆಲಂಗಾಣ ಚುನಾವಣಾ ಕಣ ರಂಗೇರಿದ್ದು, ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪರಸ್ಪರ ಕೆಸರೆರಚಾಟ ನಡೆಸಿದ್ದಾರೆ.


ರಾಜಸ್ಥಾನದ ಜೋಧ್ ಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರೆ, ತೆಲಂಗಾಣದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಜೋಧ್ ಪುರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ಸುಳ್ಳುಗಳ ವಿಶ್ವವಿದ್ಯಾಲಯವಿದ್ದಂತೆ ಎಂದಿದ್ದಾರಲ್ಲದೆ, ತಮಗೆ ಹಿಂದೂ ತತ್ವದ ಬಗ್ಗೆ ಸರಿಯಾದ ತಿಳುವಳಿಕೆ ಇಲ್ಲದ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ. ರಾಜಸ್ಥಾನ ಚುನಾವಣೆಗೂ ಹಿಂದೂ ತತ್ವಕ್ಕೂ ಎತ್ತಣ ಸಂಬಂಧ? ಇಲ್ಲಿನ ಜನರಿಗೆ ಅಭಿವೃದ್ಧಿ ಬೇಕೇ ಹೊರತು ನನಗೆ ಹಿಂದೂ ತತ್ವದ ಬಗ್ಗೆ ಗೊತ್ತಿದೆ, ಗೊತ್ತಿಲ್ಲ ಎನ್ನುವುದನ್ನು ನೋಡಿಕೊಂಡು ಜನ ವೋಟ್ ಹಾಕುವುದಲ್ಲ’ ಎಂದು ಲೇವಡಿ ಮಾಡಿದ್ದಾರೆ.

ಇನ್ನೊಂದೆಡೆ ತೆಲಂಗಾಣದಲ್ಲಿ ಮಾತನಾಡಿದ ರಾಹುಲ್ ಗಾಂಧಿ ತಮ್ಮನ್ನು ಟಿಆರ್ ಎಸ್ ಜತೆಗೆ ಒಳ ಒಪ್ಪಂದ ಮಾಡಿದ್ದಾಗಿ ಹೇಳಿದ ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದಾರೆ.  ‘ತೆಲಂಗಾಣದ ಜನರೇ, ಮೋದಿ, ಒವೈಸಿ, ಕೆಸಿಆರ್ ಎಲ್ಲರೂ ಒಂದೇ. ಅವರು ಬೇಕಾದ ಹಾಗೆ ನಾಲಿಗೆ ಹರಿಯಬಿಡುತ್ತಾರೆ. ಅವರ ಮಾತುಗಳಿಗೆ ಮರುಳಾಗಬೇಡಿ’ ಎಂದು ರಾಹುಲ್ ವ್ಯಂಗ್ಯ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments