Webdunia - Bharat's app for daily news and videos

Install App

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಪರಸ್ಪರ ಜಗಳ್ ಬಂದಿ

Webdunia
ಮಂಗಳವಾರ, 4 ಡಿಸೆಂಬರ್ 2018 (08:57 IST)
ನವದೆಹಲಿ: ರಾಜಸ್ಥಾನ ಮತ್ತು ತೆಲಂಗಾಣ ಚುನಾವಣಾ ಕಣ ರಂಗೇರಿದ್ದು, ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪರಸ್ಪರ ಕೆಸರೆರಚಾಟ ನಡೆಸಿದ್ದಾರೆ.


ರಾಜಸ್ಥಾನದ ಜೋಧ್ ಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರೆ, ತೆಲಂಗಾಣದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಜೋಧ್ ಪುರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ಸುಳ್ಳುಗಳ ವಿಶ್ವವಿದ್ಯಾಲಯವಿದ್ದಂತೆ ಎಂದಿದ್ದಾರಲ್ಲದೆ, ತಮಗೆ ಹಿಂದೂ ತತ್ವದ ಬಗ್ಗೆ ಸರಿಯಾದ ತಿಳುವಳಿಕೆ ಇಲ್ಲದ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ. ರಾಜಸ್ಥಾನ ಚುನಾವಣೆಗೂ ಹಿಂದೂ ತತ್ವಕ್ಕೂ ಎತ್ತಣ ಸಂಬಂಧ? ಇಲ್ಲಿನ ಜನರಿಗೆ ಅಭಿವೃದ್ಧಿ ಬೇಕೇ ಹೊರತು ನನಗೆ ಹಿಂದೂ ತತ್ವದ ಬಗ್ಗೆ ಗೊತ್ತಿದೆ, ಗೊತ್ತಿಲ್ಲ ಎನ್ನುವುದನ್ನು ನೋಡಿಕೊಂಡು ಜನ ವೋಟ್ ಹಾಕುವುದಲ್ಲ’ ಎಂದು ಲೇವಡಿ ಮಾಡಿದ್ದಾರೆ.

ಇನ್ನೊಂದೆಡೆ ತೆಲಂಗಾಣದಲ್ಲಿ ಮಾತನಾಡಿದ ರಾಹುಲ್ ಗಾಂಧಿ ತಮ್ಮನ್ನು ಟಿಆರ್ ಎಸ್ ಜತೆಗೆ ಒಳ ಒಪ್ಪಂದ ಮಾಡಿದ್ದಾಗಿ ಹೇಳಿದ ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದಾರೆ.  ‘ತೆಲಂಗಾಣದ ಜನರೇ, ಮೋದಿ, ಒವೈಸಿ, ಕೆಸಿಆರ್ ಎಲ್ಲರೂ ಒಂದೇ. ಅವರು ಬೇಕಾದ ಹಾಗೆ ನಾಲಿಗೆ ಹರಿಯಬಿಡುತ್ತಾರೆ. ಅವರ ಮಾತುಗಳಿಗೆ ಮರುಳಾಗಬೇಡಿ’ ಎಂದು ರಾಹುಲ್ ವ್ಯಂಗ್ಯ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments