Webdunia - Bharat's app for daily news and videos

Install App

ಅಭಿವೃದ್ಧಿಗೆ ಮತ ಹಾಕಿ ಎಂದ ರಶ್ಮಿಕಾ ಮಂದಣ್ಣ ಮೆಸೇಜ್ ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

Krishnaveni K
ಶುಕ್ರವಾರ, 17 ಮೇ 2024 (10:49 IST)
Photo Courtesy: Twitter
ನವದೆಹಲಿ: ಕಳೆದ 10 ವರ್ಷಗಳಲ್ಲಿ ದೇಶ ಸಾಕಷ್ಟು ಅಭಿವೃದ್ಧಿ ಕಂಡಿದೆ. ಅಭಿವೃದ್ಧಿಗೆ ಮತ ನೀಡಿ ಎಂದು ರಶ್ಮಿಕಾ ಮಂದಣ್ಣ ನೀಡಿದ್ದ ಸಂದೇಶ ಈಗ ಪ್ರಧಾನಿ ಮೋದಿ ಗಮನಸೆಳೆದಿದೆ.

ರಶ್ಮಿಕಾ ಟ್ವೀಟ್ ನ್ನು ರಿಟ್ವೀಟ್ ಮಾಡಿರುವ ಮೋದಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಭಾರತ ದೊಡ್ಡದಾಗಿ ಕನಸು ಕಾಣಲು ಸಾಧ‍್ಯವಿಲ್ಲ ಎನ್ನುತ್ತಿದ್ದಾರೆ. ಆದರೆ ಈ ಅಟಲ್ ಸೇತುವೆಯನ್ನು ಕೇವಲ ಏಳೆಂಟು ವರ್ಷಗಳಲ್ಲಿ ನಿರ್ಮಾಣ ಮಾಡಲಾಗಿದೆ. ಇದರಿಂದ ಪ್ರಯಾಣದ ಅವಧಿ 20 ನಿಮಿಷಕ್ಕೆ ಇಳಿದಿದೆ. ಯುವ ಭಾರತಕ್ಕೆ ಇದೇ ಗ್ಯಾರಂಟಿ. ಈ ರೀತಿಯ ನೂರಾರು ಅಟಲ್ ಸೇತುವೆ ನಿರ್ಮಾಣವಾಗಬೇಕು ಎಂದರೆ ಅಭಿವೃದ್ಧಿಗೆ ಮತ ಹಾಕಿ’ ಎಂದು ರಶ್ಮಿಕಾ ಟ್ವೀಟ್ ಮಾಡಿದ್ದರು.

ಅವರ ಟ್ವೀಟ್ ಪ್ರಧಾನಿ ಮೋದಿಯನ್ನೂ ತಲುಪಿದೆ. ರಶ್ಮಿಕಾ ಟ್ವೀಟ್ ನ್ನು ರಿಟ್ವೀಟ್ ಮಾಡಿರುವ ಮೋದಿ ‘ಖಂಡಿತಾ ಜನರ ಸಂಪರ್ಕ ಮತ್ತು ಪ್ರಯಾಣ ಸುಧಾರಿಸುವುದಕ್ಕಿಂತ ತೃಪ್ತಿಕರ ಕೆಲಸ ಮತ್ತೊಂದಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ. ಮೋದಿ ಮಾಡಿರುವ ಈ ಟ್ವೀಟ್ ಎಲ್ಲರ ಗಮನ ಸೆಳೆದಿದೆ.

ಅಟಲ್ ಸೇತು ಭಾರತದ ಅತ್ಯಂತ ಉದ್ದನೆಯ ಸಮುದ್ರ ಸೇತುವೆಯಾಗಿದೆ. ಇದು ಮುಂಬೈ ಮತ್ತು ನವಿ ಮುಂಬೈ ನಡುವೆ ಸಂಪರ್ಕ ಸಾಧಿಸುತ್ತದೆ. ಮೊದಲು ಈ ಎರಡೂ ಸ್ಥಳಗಳ ನಡುವಿನ ದೂರ ಎರಡೂವರೆ ಗಂಟೆಗಳಾಗಿತ್ತು. ಆದರೆ ಈಗ ಕೇವಲ 20 ನಿಮಿಷ ಸಾಕಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments