ಬಿಜೆಪಿಗೆ ಮತ್ತೆ ಅಧಿಕಾರ ಕೊಡ್ತಾರೆ, ಕಾಂಗ್ರೆಸ್ ಬಂದರೆ ನೋ ಎಂಟ್ರಿ ಬೋರ್ಡ್ ಹಾಕ್ತಾರೆ: ಪ್ರಧಾನಿ ಮೋದಿ

Krishnaveni K
ಬುಧವಾರ, 9 ಅಕ್ಟೋಬರ್ 2024 (11:19 IST)
ನವದೆಹಲಿ: ಹರ್ಯಾಣದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಖುಷಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.
 

ಎಲ್ಲೆಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೋ ಅಲ್ಲೆಲ್ಲಾ ಬಿಜೆಪಿಯ ಜನಪರ ನೀತಿಗಳನ್ನು ಮೆಚ್ಚಿ ಜನ ಮತ್ತೆ ಮತ್ತೆ ನಮಗೆ ಅವಕಾಶ ಕೊಡುತ್ತದೆ. ಆದರೆ ಕಾಂಗ್ರೆಸ್ ಗೆ ಹಾಗಲ್ಲ. ಆ ಪಕ್ಷ ಒಮ್ಮೆ ಅಧಿಕಾರಕ್ಕೆ ಬಂದರೆ ಅದರ ನೀತಿಗಳಿಂದ ಬೇಸತ್ತು ಜನ ನೋ ಎಂಟ್ರಿ ಬೋರ್ಡ್ ಹಾಕುತ್ತಾರೆ ಎಂದು ಮೋದಿ ಟಾಂಗ್ ನೀಡಿದ್ದಾರೆ.

ಹರ್ಯಾಣದಲ್ಲಿ ಈ ಬಾರಿ 10 ವರ್ಷಗಳ ಬಿಜೆಪಿ ಆಡಳಿತ ಕೊನೆಯಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ ನಿನ್ನೆಯ ವಿಧಾನಸಭೆ ಚುನಾವಣೆ ಫಲಿತಾಂಶ ಬರುತ್ತಿದ್ದಂತೇ ಅದೆಲ್ಲವೂ ಸುಳ್ಳಾಗಿದೆ. ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.

ಈ ಹಿನ್ನಲೆಯಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಏರ್ಪಡಿಸಲಾಗಿತ್ತು. ಇದರಲ್ಲಿ ಮೋದಿ ಕೂಡಾ ಭಾಗಿಯಾಗಿದ್ದಾರೆ. ಸಮಾಜವನ್ನು ದುರ್ಬಲಗೊಳಿಸಿ, ಅರಾಜಕತೆ ಸೃಷ್ಟಿಸಿ ಕಾಂಗ್ರೆಸ್ ದೇಶವನ್ನು ದುರ್ಬಲಗೊಳಿಸುತ್ತದೆ. ದೇಶದಲ್ಲಿ ಬೆಂಕಿ ಹಚ್ಚುತ್ತದೆ, ರೈತರನ್ನು ಎತ್ತಿಕಟ್ಟುತ್ತದೆ. ಇದಕ್ಕೆಲ್ಲಾ ಜನ ತಕ್ಕ ಉತ್ತರ ನೀಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments