Select Your Language

Notifications

webdunia
webdunia
webdunia
Tuesday, 8 April 2025
webdunia

ನಮ್ಮ ರಕ್ತ ಕುದಿಯುತ್ತಿದೆ, ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ಸೇನೆಗೆ ಪೂರ್ಣ ಅಧಿಕಾರ: ಪ್ರಧಾನಿ ಮೋದಿ

ಪ್ರಧಾನಿ ಮೋದಿ
ನವದೆಹಲಿ , ಶುಕ್ರವಾರ, 15 ಫೆಬ್ರವರಿ 2019 (11:36 IST)
ನವದೆಹಲಿ: ಉಗ್ರರನ್ನು ಬೆಳೆಸಿ ಭಾರತದ ಮೇಲೆ ಛೂ ಬಿಡುತ್ತಿರುವ ಪಾಕಿಸ್ತಾನ ವಿರುದ್ಧ ಕೆಂಡಾಮಂಡಲರಾಗಿರುವ ಪ್ರಧಾನಿ ಮೋದಿ ಪುಲ್ವಾಮಾದಲ್ಲಿ ಭಾರತೀಯ ಯೋಧರನ್ನು ಹತ್ಯೆಗೈದ ಉಗ್ರರ ವಿರುದ್ಧ ದಾಳಿ ಮಾಡಲು ಸೇನೆಗೆ ಪೂರ್ಣ ಅಧಿಕಾರ ನೀಡಿದ್ದಾರೆ.


ನಮ್ಮ ರಕ್ತ ಕುದಿಯುತ್ತಿದೆ. ಇಡೀ ದೇಶವೇ ತಾಳ್ಮೆಗೆಟ್ಟಿದೆ. ಪಾಕಿಸ್ತಾನ ದೊಡ್ಡ ತಪ್ಪು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಲ್ಲದೆ, ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಸೇನೆಗೆ ಪೂರ್ಣ ಅಧಿಕಾರ ನೀಡಿದ್ದಾರೆ.

ಇನ್ನು, ಉಗ್ರರ ವಿರುದ್ಧ ಭೂಸೇನೆಯ ಸೈನಿಕರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸೇನಾ ಮುಖ್ಯಸ್ಥರೂ ಆಗಿರುವ ರಕ್ಷಣಾ ಖಾತೆ ರಾಜ್ಯ ಸಚಿವ ಜನರಲ್ ವಿಕೆ ಸಿಂಗ್ ಹೇಳಿದ್ದಾರೆ. ಇದೀಗ ಕೇಂದ್ರ ಸರ್ಕಾರ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ತಮ್ಮಿಂದ ಸಾಧ್ಯವಾದ ಆಯ್ಕೆಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಮಾತೃಭೂಮಿಯ ಬೆನ್ನಿಗೆ ಚೂರಿ ಹಾಕಿದ ಉಗ್ರ ಆದಿಲ್ ಅಹಮ್ಮದ್ ಧರ್