Webdunia - Bharat's app for daily news and videos

Install App

ಕರ್ನಾಟಕದ ಗ್ಯಾರಂಟಿ ಗೊಂದಲವನ್ನು ಮಲ್ಲಿಕಾರ್ಜುನ ಖರ್ಗೆಯೇ ಬಯಲು ಮಾಡಿದರು: ಪ್ರಧಾನಿ ಮೋದಿ

Krishnaveni K
ಶುಕ್ರವಾರ, 1 ನವೆಂಬರ್ 2024 (20:20 IST)
Photo Credit: X
ನವದೆಹಲಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಗೊಂದಲದ ಬಗ್ಗೆ ಸ್ವತಃ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯೇ ಬಣ್ಣ ಬಯಲು ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ ಖರ್ಗೆ ನೀಡಿದ ಎಚ್ಚರಿಕೆಯಿಂದ ಕಾಂಗ್ರೆಸ್ ನ ಬಣ್ಣ ಬಯಲಾಗಿದೆ ಎಂದು ಮೋದಿ ಟೀಕಾ ಪ್ರಹಾರ ನಡೆಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಅಭಿವೃದ್ಧಿ ಕಡೆಗೆ ಗಮನಹರಿಸುವುದು ಬಿಟ್ಟು ಜನರನ್ನು ಲೂಟಿ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ವಾಸ್ತವಕ್ಕೆ ದೂರವಾದ ಭರವಸೆಗಳನ್ನು ನೀಡುವುದು ಸುಲಭ. ಆದರೆ ಅದನ್ನು ಈಡೇರಿಸುವುದು ಕಷ್ಟ ಎಂದು ಕಾಂಗ್ರೆಸ್ ಗೆ ಈಗ ಮನವರಿಕೆಯಾಗಿದೆ. ಕಾಂಗ್ರೆಸ್ ನ ಸುಳ್ಳು ಭರವಸೆಗಳ ಬಗ್ಗೆ ದೇಶದ ಜನ ಈಗ ಜಾಗೃತರಾಗಬೇಕಾದ ಕಾಲ ಬಂದಿದೆ ಎಂದು ಮೋದಿ ಎಚ್ಚರಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಸರ್ಕಾರಕ್ಕೆ ವೇತನ ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಭರವಸೆ ನೀಡಿದ ಸಾಲ ಮನ್ನಾ ಯಾವಾಗ ಆಗುತ್ತದೋ ಎಂದು ಜನ ಕಾದು ಕೂತಿದ್ದಾರೆ. ಛತ್ತೀಸ್ ಘಡ ಮತ್ತು ರಾಜಸ್ಥಾನದಲ್ಲಿ ಕೆಲವು ಭರವಸೆಗಳನ್ನು ನೀಡಿರುವುದನ್ನು ಇಂದಿಗೂ ಪೂರೈಸಿಲ್ಲ. ಕಾಂಗ್ರೆಸ್ ನ ಇಂತಹ ಅನೇಕ ಉದಾಹರಣೆಗಳಿವೆ ಎಂದು ಮೋದಿ ಸುದೀರ್ಘ ಟ್ವೀಟ್ ಮೂಲಕ ಟೀಕಾ ಪ್ರಹಾರ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments