ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

Krishnaveni K
ಸೋಮವಾರ, 8 ಡಿಸೆಂಬರ್ 2025 (13:56 IST)
ನವದೆಹಲಿ: ಇಂದು ಲೋಕಸಭೆಯಲ್ಲಿ ವಂದೇಮಾತರಂ ಗೀತೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವೇಳೆ ಮಾತನಾಡಿರುವ ಪ್ರಧಾನಿ ಮೋದಿ ಕಾಂಗ್ರೆಸ್ ಈ ಹಿಂದೆ ಮುಸ್ಲಿಮರ ತುಷ್ಠೀಕರಣಕ್ಕಾಗಿ ವಂದೇ ಮಾತರಂ ಹಾಡನ್ನು ತುಂಡು ತುಂಡು ಮಾಡಿತು ಎಂದು ಗುಡುಗಿದ್ದಾರೆ.

ರಾಷ್ಟ್ರೀಯ ಹಾಡು ವಂದೇ ಮಾತರಂಗೆ 150 ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಲೋಕಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಈ ವೇಳೆ ಮಾತನಾಡಿರುವ ಪ್ರಧಾನಿ ಮೋದಿ, ಈ ಹಿಂದೆ ಜಿನ್ನಾ ವಂದೇ ಮಾತರಂ ಹಾಡು ವಿರೋಧಿಸಿ ಪ್ರತಿಭಟಿಸಿದಾಗ ನೆಹರೂ ಅದನ್ನು ಬೆಂಬಲಿಸಿದ್ದರು.

ವಂದೇ ಮಾತರಂ ಹಾಡಿನ ವಿರುದ್ಧ ಮುಸ್ಲಿಂ ಲೀಗ್ ನೆಹರೂ ಅವರಿಗೆ ಪತ್ರ ಬರೆದು ತನ್ನ ವಿರೋಧ ವ್ಯಕ್ತಪಡಿಸಿತ್ತು. ಮೊಹಮ್ಮದ್ ಅಲಿ ಜಿನ್ನಾ ವಂದೇ ಮಾತರಂ ವಿರುದ್ಧ ಘೋಷಣೆ ಕೂಗಿದರು. ಇದನ್ನು ನೆಹರೂ ಪ್ರತಿಭಟಿಸಲಿಲ್ಲ. ಬದಲಾಗಿ ಇದಾದ ಕೇವಲ ಐದು ದಿನಗಳ ಬಳಿಕ ವಂದೇ ಮಾತರಂ ಹಾಡು ಪುನರ್ ಪರಿಶೀಲಿಸುವ ಕೆಲಸ ಮಾಡಿದರು.

ಬಳಿಕ ನೆಹರೂ ಅವರು ಸುಭಾಷ್ ಚಂದ್ರ ಭೋಸ್ ಅವರಿಗೆ ಪತ್ರ ಬರೆದು, ವಂದೇ ಮಾತರಂ ಹಾಡಿನ ಹಿನ್ನಲೆಯನ್ನು ನಾನು ತಿಳಿದುಕೊಂಡಿದ್ದೇನೆ. ಇದರಲ್ಲಿರುವ ಸಾಲುಗಳು ಮುಸ್ಲಿಮರಿಗೆ ಕಿರಿ ಕಿರಿಯಾಗಬಹುದು ಎಂದಿದ್ದರು. ಬಳಿಕ ದೇಶದ ದೌರ್ಭಾಗ್ಯ ಎನ್ನುವಂತೆ ಕಾಂಗ್ರೆಸ್ ವಂದೇ ಮಾತರಂ ಹಾಡಿಗೆ ಕತ್ತರಿ ಹಾಕಿತು ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ಮುಂದಿನ ಸುದ್ದಿ
Show comments