Webdunia - Bharat's app for daily news and videos

Install App

ನಿನ್ನೆ ಸಂಸತ್ ನಲ್ಲಿ ರಾಹುಲ್ ಗಾಂಧಿ ಶೋ, ಇಂದು ಪ್ರಧಾನಿ ಮೋದಿ ಸರದಿ

Krishnaveni K
ಮಂಗಳವಾರ, 2 ಜುಲೈ 2024 (09:48 IST)
ನವದೆಹಲಿ: ದೇಶದ ರಾಜಕೀಯ ಈಗ ಯಾವ ಸಿನಿಮಾಗೂ ಕಮ್ಮಿಯಿಲ್ಲದ ರೀತಿಯಲ್ಲಿ ಏಟು-ಎದಿರೇಟಿನ ರಣಾಂಗಣವಾಗಿದೆ. ನಿನ್ನೆ ಸಂಸತ್ ನಲ್ಲಿ ವೀರಾವೇಷದ ಭಾಷಣ ಮಾಡಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಇಂದು ಪ್ರಧಾನಿ ಮೋದಿ ಎದಿರೇಟು ಕೊಡಲು ಸಿದ್ಧತೆ ನಡೆಸಿದ್ದಾರೆ.

ಇಂದು ಮತ್ತು ನಾಳೆ ಸಂಸತ್ ನಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಸಂಬಂಧ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಈ ವೇಳೆ ನಿನ್ನೆ ರಾಹುಲ್ ಗಾಂಧಿ ಮಾಡಿದ ಆರೋಪಗಳಿಗೆ ಇಂದು ಮೋದಿ ಪ್ರತ್ಯುತ್ತರ ನೀಡುವ ನಿರೀಕ್ಷೆಯಿದೆ. ನಿನ್ನೆ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮತ್ತು ಮಲ್ಲಿಕಾರ್ಜುನ ಖರ್ಗೆ ರಾಜ್ಯ ಸಭೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಅದರಲ್ಲೂ ರಾಹುಲ್ ಗಾಂಧಿಯಂತೂ ವಿಪಕ್ಷ ನಾಯಕನಾಗಿ ಮೊದಲ ಭಾಷಣದಲ್ಲೇ ಬಿಜೆಪಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ಹಿಂದೂ ಹೆಸರು ಹೇಳಿಕೊಳ್ಳುವವರು ಪ್ರತಿನಿತ್ಯ ಹಿಂಸೆ, ಭಯ ಹುಟ್ಟಿಸುತ್ತಾರೆ ಎಂದಿದ್ದರು. ಅವರ ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಅಗ್ನಿವೀರ್ ಯೋಜನೆ, ನೀಟ್ ಅಕ್ರಮದ ಕುರಿತಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಸ್ಪೀಕರ್ ಓಂ ಬಿರ್ಲಾರನ್ನೂ ಬಿಡದ ರಾಹುಲ್, ನೀವು ಮೋದಿಗೆ ಮಾತ್ರ ತಲೆಬಾಗಿ ನಮಸ್ಕರಿಸಿದ್ದೀರಿ. ನನಗೆ ನೇರವಾಗಿ ನಿಂತು ಕೈ ಕುಲುಕಿದಿರಿ ಎಂದು ಕೆಂಡ ಕಾರಿದ್ದರು.

ರಾಹುಲ್ ಗಾಂಧಿಯ ಎಲ್ಲಾ ಆರೋಪಗಳಿಗೆ ಪ್ರಧಾನಿ ಮೋದಿ ಇಂದು ಪ್ರತ್ಯುತ್ತರ ನೀಡುವ ನಿರೀಕ್ಷೆಯಿದೆ. ನಿನ್ನೆಯೇ ಮೋದಿ ಎರಡು ಬಾರಿ ಎದ್ದು ನಿಂತು ರಾಹುಲ್ ಮಾತುಗಳನ್ನು ಆಕ್ಷೇಪಿಸಿದ್ದರು. ಇಂದು ಮತ್ತು ನಾಳೆ ಮೋದಿ ಕೂಡಾ ಉಗ್ರಾವತಾರ ತಾಳುವ ನಿರೀಕ್ಷೆಯಿದೆ. ಇಂದು ಸಂಜೆ 4 ಗಂಟೆಗೆ ಮೋದಿ ಭಾಷಣ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments