Publish Date: Mon, 29 Jan 2018 (10:58 IST)
Updated Date: Mon, 29 Jan 2018 (11:01 IST)
ನವದೆಹಲಿ: ಇಂದಿನಿಂದ ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸಂಸತ್ ಭವನದ ಹೊರಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ಸಂಸತ್ ಭವನದ ಹೊರಗೆ ಮಾತನಾಡಿದ ಪ್ರಧಾನಿ, ಸುಗಮ ಕಲಾಪಕ್ಕೆ ಅನುವು ಮಾಡಿಕೊಡವಂತೆ ಮನವಿ ಮಾಡಿದ್ದಾರೆ. ಬಜೆಟ್ ದೇಶದ ಅರ್ಥ ವ್ಯವಸ್ಥೆಯನ್ನು ಬದಲಾಯಿಸುವಂತಹದ್ದು ಎಂದಿದ್ದಾರೆ.
ಅಷ್ಟೇ ಅಲ್ಲದೆ, ಈ ಅಧಿವೇಶನದಲ್ಲಿ ತ್ರಿವಳಿ ತಲಾಖ್ ವಿಧೇಯಕ ಮಂಡನೆಯಾಗಲಿದೆ. ಈ ಹಿನ್ನಲೆಯಲ್ಲಿ ವಿಪಕ್ಷಗಳು ವಿಧೇಯಕವನ್ನು ಬೆಂಬಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ