Webdunia - Bharat's app for daily news and videos

Install App

ಒಂದೇ ಏಟಿಗೆ ಎರಡು ಹಕ್ಕಿಯ ಹೊಡೆದುರುಳಿಸಿದರೇ ಪ್ರಧಾನಿ ಮೋದಿ?

Webdunia
ಗುರುವಾರ, 22 ಜೂನ್ 2017 (09:36 IST)
ನವದೆಹಲಿ: ದಲಿತ ಮುಖಂಡನನ್ನು ರಾಷ್ಟ್ರಪತಿ ಅಭ್ಯರ್ಥಿಯ ಘೋಷಣೆ ಮಾಡುವುದರೊಂದಿಗೆ ವಿಪಕ್ಷಗಳ ಅರಿವಿಗೂ ಬರದಂತೆ ಒಂದೇ ಕಲ್ಲಿಗೆ ಎರಡು ಹಕ್ಕಿಯನ್ನು ಹೊಡೆದುರುಳಿಸಿದರೇ ಪ್ರಧಾನಿ ಮೋದಿ?

 
ಇಂದಿನ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ಅದು ನಿಜವೆನಿಸುತ್ತದೆ. ದಲಿತ ಮುಖಂಡನನ್ನು ಆರಿಸಿದ ಕಾರಣ ಪ್ರತಿಪಕ್ಷಗಳಿಗೆ ವಿರೋಧಿಸುವಂತೆಯೂ ಇಲ್ಲ. ಬೆಂಬಲಿಸಿದರೆ ಪ್ರತಿಷ್ಠೆಯ ಪ್ರಶ್ನೆ.

ಅತ್ತ ಪ್ರಧಾನಿ ಮೋದಿ ನಾಯಕತ್ವಕ್ಕೆ ಪರ್ಯಾಯವಾಗಿ ಕಾಂಗ್ರೆಸ್ ನೇತೃತ್ವದಲ್ಲಿ ದೇಶದ ಸಣ್ಣ ಪುಟ್ಟ ಪಕ್ಷಗಳೆಲ್ಲಾ ಒಂದಾಗಿ ಮಹಾಘಟಬಂಧನವೊಂದು ಏರ್ಪಡುತ್ತಿತ್ತು. ಇದೀಗ ರಾಷ್ಟ್ರಪತಿ ಚುನಾವಣೆ ನೆಪದಲ್ಲಿ ಪ್ರಧಾನಿ ಮೋದಿ ಆ ಘಟಬಂಧನವನ್ನು ಒಡೆದೇ ಬಿಟ್ಟರು ಎನ್ನಬಹುದು.

ಕಾಂಗ್ರೆಸ್ ರಮಾನಾಥ್ ಕೋವಿಂದ್ ರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಒಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದೆ. ಆದರೆ ಇಷ್ಟು ದಿನ ಆ ಪಕ್ಷದ ಜತೆಗಿದ್ದ ಜೆಡಿಯು ಕೂಡಾ ಸದ್ದಿಲ್ಲದೆ ಕೈಕೊಡುತ್ತಿದೆ. ಇದರಿಂದ ಬಿಹಾರದಲ್ಲಿ ಆರ್ ಜೆಡಿ ಮತ್ತು ಜೆಡಿಯು ಮಧ್ಯೆ ಒಡಕು ಮೂಡಲಿದೆ ಎಂದು ವಿಶ್ಲೇಷಿಸಲಾಗಿದೆ.

ಇದು ಕಾಂಗ್ರೆಸ್ ಗೆ ನಿಜಕ್ಕೂ ನುಂಗಲಾರದ ತುತ್ತಾಗಿದೆ. ಹೀಗೆ ವಿರೋಧ ಪಕ್ಷಗಳೆಲ್ಲಾ ಒಂದಾಗಿ ದೊಡ್ಡ ಶಕ್ತಿಯಾಗಿ ರೂಪುಗೊಳ್ಳುವ ಮೊದಲೇ ಪ್ರಧಾನಿ ಮೋದಿ ರಾಷ್ಟ್ರಪತಿ ಚುನಾವಣೆ ಎಂಬ ಗಾಳ ಹಾಕಿ ಬಂಧನವನ್ನೇ ಮುರಿದಿದ್ದಾರೆ. ಇದೀಗ ವಿರೋಧ ಪಕ್ಷಗಳ ಒಗ್ಗಟ್ಟೆಲ್ಲಾ ಮೂಲೆಗುಂಪಾಗಿದೆ.

ಅತ್ತ ಕಾಂಗ್ರೆಸ್ ಗೆ ಇದೀಗ ಆರ್ ಜೆಡಿ,  ತೃಣಮೂಲ ಕಾಂಗ್ರೆಸ್, ಸಿಪಿಐಎಂ ಪಕ್ಷಗಳ ಬಲವಿದೆ. ಬಿಜೆಪಿ ದಲಿತ ಮುಖಂಡನನ್ನು ಆರಿಸಿದ್ದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡಾ ದಲಿತ ಮುಖಂಡನಿಗಾಗಿ ಹುಡುಕಾಟ ಆರಂಭಿಸಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಬಿಆರ್ ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಹೆಸರೂ ಕೇಳಿಬರುತ್ತಿದೆ. ಆದರೂ ಇದೀಗ ಎನ್ ಡಿಎ ಅಭ್ಯರ್ಥಿಗೆ ಹೆಚ್ಚಿನ ಬೆಂಬಲ ಸಿಗುತ್ತಿರುವುದು ಕಾಂಗ್ರೆಸ್ ಚಿಂತೆಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments